ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಸುರೇಶ್ ಕುಮಾರ್
ಬೆಂಗಳೂರು, ಏ 16,ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ಕುಮಾರ್ ತಳ್ಳಿಹಾಕಿದ್ದಾರೆ.ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಈ ಕುರಿತು ಫೇಸ್ಬುಕ್ ಲೈವ್ನಲ್ಲಿ ಸ್ಪಷ್ಟಪಡಿಸಿದ ಸಚಿವರು, ೧೦ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆಗೊಳಿಸಲಾಗುವುದು ಎಂಬ ವದಂತಿಗಳು ಸಹ ಹರಿದಾಡುತ್ತಿವೆ. ಆದರೆ ಅದು ಶುದ್ಧ ಸುಳ್ಳು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಿ. ಪರೀಕ್ಷೆಗಳ ಬಗ್ಗೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಬರುವ ಮೇ ೩ರ ನಂತರ ದಿನಾಂಕ ಪ್ರಕಟಿಸುವುದಾಗಿ ಸುರೇಶ್ ಕುಮಾರ್ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 