ಉಪ್ಪಿನಂಗಡಿ : ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ
ಮಂಗಳೂರು , ಮಾ 28, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ. ಶನಿವಾರ ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದು, ಅನಿಲ ಸೋರಿಕೆ ಉಂಟಾಗಿದೆ. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆ ನಡೆಸಲಾಯಿತು.ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇಂದು ದ.ಕ . ಜಿಲ್ಲೆಯಲ್ಲಿ ಪೂರ್ಣ ಬಂದ್ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕನಿಷ್ಠ ಪ್ರಮಾಣದಲ್ಲಿತ್ತು. ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಚರಣೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 