ಉಪ್ಪಿನಂಗಡಿ : ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ
ಮಂಗಳೂರು , ಮಾ 28, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ. ಶನಿವಾರ ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದು, ಅನಿಲ ಸೋರಿಕೆ ಉಂಟಾಗಿದೆ. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆ ನಡೆಸಲಾಯಿತು.ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇಂದು ದ.ಕ . ಜಿಲ್ಲೆಯಲ್ಲಿ ಪೂರ್ಣ ಬಂದ್ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕನಿಷ್ಠ ಪ್ರಮಾಣದಲ್ಲಿತ್ತು. ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಚರಣೆ ನಡೆಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 