ಅಪರಿಚಿತರ ಗುಂಡಿಗೆ ಸಮಾಜವಾದಿ ಪಕ್ಷದ ಮುಖಂಡ ಬಲಿ
ನವದೆಹಲಿ, ಜ,12 : ಸಮಾಜವಾದಿ ಪಕ್ಷದ(ಎಸ್ ಪಿ) ಮುಖಂಡ ಬಿಜ್ಲಿ ಯಾದವ್ ನನ್ನು ಅಪರಿಚಿತ ವ್ಯಕ್ತಿಗಳು ಉತ್ತರಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಈ ಘಟನೆ ಇಂದು ಮುಂಜಾನೆ ನಡೆದಿದೆ. ಸಖ್ವಾಲಿಯಾ ಗ್ರಾಮದ ಮಾಜಿ ಗ್ರಾಮ ಮುಖ್ಯಸ್ಥರಾಗಿದ್ದ ಯಾದವ್, ಇಂದು ಬೆಳಿಗ್ಗೆ ಹೊಲಕ್ಕೆ ಹೋಗುವಾಗ ಗುಂಡು ಹಾರಿಸಲಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಯಾದವ್ ಅವರಿಗೆ 40 ವರ್ಷ ವಯಸ್ಸಾಗಿತ್ತು. ಬೈಕ್ ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ನಂತರ ಮಿಂಚಿನ ವೇಗದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ಧಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 