‘ಭಾಗ್ಯವಂತರು’ ನೂತನ ತಂತ್ರಜ್ಞಾನದಲ್ಲಿ!
ಬೆಂಗಳೂರು, ಜುಲೈ 2: ಕನ್ನಡ ಪ್ರೇಕ್ಷಕರು ಎಂದಿಗೂ ಮರೆಯಲಾಗದ ಚಿತ್ರ ಡಾ.ರಾಜ್ ಅಭಿನಯದ ‘ಭಾಗ್ಯವಂತರು’. ಈ ಚಿತ್ರ ನೂತನ ತಂತ್ರಜ್ಞಾನದಲ್ಲಿ ಮತ್ತೆ ಅಭಿಮಾನಿಗಳೆದರು ಬರಲು ಸಿದ್ಧವಾಗಿದೆ.
ಶ್ರೀ ಮುನೇಶ್ವರ ಫಿಲಂಸ್ ಮಾಲೀಕರಾದ ಎಂ. ಮುನಿರಾಜು ಈ ಪ್ರಯತ್ನದಲ್ಲಿದ್ದು, ಕೊರೋನಾ ಹಾವಳಿಯ ಬಳಿಕ ರಾಜ್ಯದ ಕಲಾಭಿಮಾನಿಗಳಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ. ದ್ವಾರಕೀಶ್ ಚಿತ್ರ ಸಂಸ್ಥೆಯಲ್ಲಿ ತಯಾರಾಗಿ ಸೂಪರ್ ಹಿಟ್ ಆದ ಚಿತ್ರ ಇಂದಿನ ತಂತ್ರಜ್ಞಾನದಲ್ಲಿ ಸಿನಿಮಾಸ್ಕೋಪ್ 7.1ಡಿ.ಐ ಬಳಸಿಕೊಳ್ಳಲಾಗಿದೆ. ‘ಭಾಗ್ಯವಂತರು’ ಕಿವಿಗೆ ಇಂಪಾದ ಹಾಡುಗಳೊಂದಿಗೆ ರಾಜ್ ಕುಮಾರ್, ಬಿ. ಸರೋಜಾದೇವಿ, ಅಶೋಕ್ ಮೊದಲಾದವರು ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ.
ರಾಜನ್-ನಾಗೇಂದ್ರ ಜೋಡಿಯ ಸಾಹಿತ್ಯಕ್ಕೆ ಚಿ. ಉದಯಶಂಕರ್ ಸಂಗೀತ ಸಂಯೋಜನೆಯಿದೆ. ದ್ವಾರಕೀಶ್ ನಿರ್ಮಾಣದ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಬ್ರಹ್ಮ ಭಾರ್ಗವ. ಈ ಚಿತ್ರವನ್ನು ಮತ್ತೆ ರಾಜ್ಯದ ಜನರ ಮನರಂಜಿಸಲು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ಶ್ರೀ ಮುನೇಶ್ವರ ಫಿಲಂಸ್ ನ ಎಂ. ಮುನಿರಾಜು ಮುಂದಾಗಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 