ಸಂಗೊಳ್ಳಿ ರಾಯಣ್ಣ ಉತ್ಸವ: ಜನೇವರಿ 6 ರಿಂದ ವೀರಜ್ಯೋತಿ ಯಾತ್ರೆ
ಬೆಳಗಾವಿ: 03 :ಸಂಗೊಳ್ಳಿ ರಾಯಣ್ಣ ಉತ್ಸವದ ಅಂಗವಾಗಿ ಜನೇವರಿ 6 ರಂದು ಬೆಳಿಗ್ಗೆ 10 ಗಂಟೆಗೆ ನಂದಗಡದಿಂದ ವೀರಜ್ಯೋತಿ ಯಾತ್ರೆ ಪ್ರಾರಂಭವಾಗಲಿದ್ದು, ಜ್ಯೋತಿಯು ಜಿಲ್ಲೆಯ ವಿವಿಧೆಡೆ ಸಂಚರಿಸಿ ಜನೇವರಿ 12 ರಂದು ಮರಳಿ ಸಂಗೊಳ್ಳಿಗೆ ತಲುಪಲಿದೆ.
ವೀರಜ್ಯೋತಿ ಯಾತ್ರೆಯು ನಂದಗಡದಿಂದ ಜನೇವರಿ 6 ರಂದು ಮಧ್ಯಾಹ್ನ ಖಾನಾಪೂರಕ್ಕೆ ಆಗಮಿಸುವುದು. ಸಂಜೆ 5 ಗಂಟೆಗೆ ಬೆಳಗಾವಿಗೆ ಆಗಮಿಸಿ, ವಾಸ್ತವ್ಯಗೊಳ್ಳುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುವು.
ಜನೇವರಿ 7 ರಂದು ಮಧ್ಯಾಹ್ನ 12 ಗಂಟೆಗೆ ಕಾಕತಿ, 3 ಗಂಟೆಗೆ ಹುಕ್ಕೇರಿ ಆಗಮಿಸಿ, ವಾಸ್ತವ್ಯಗೊಳ್ಳುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುವು.
ಜನೇವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕೋಡಿಗೆ ಆಗಮಿಸುವುದು. ಮಧ್ಯಾಹ್ನ 4 ಗಂಟೆಗೆ ಅಥಣಿ ಆಗಮಿಸಿ, ವಾಸ್ತವ್ಯಗೊಳ್ಳುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುವು.
ಜನೇವರಿ 9 ರಂದು ಮಧ್ಯಾಹ್ನ 12 ಗಂಟೆಗೆ ರಾಯಬಾಗಕ್ಕೆ ಆಗಮಿಸುವುದು. ಮಧ್ಯಾಹ್ನ 4 ಗಂಟೆಗೆ ಗೋಕಾಕ ಆಗಮಿಸಿ, ವಾಸ್ತವ್ಯಗೊಳ್ಳುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುವು.
ಜನೇವರಿ 10 ರಂದು ಬೆಳಿಗ್ಗೆ 11 ಗಂಟೆಗೆ ರಾಮದುರ್ಗ ಆಗಮಿಸುವುದು. ಮಧ್ಯಾಹ್ನ 2 ಗಂಟೆಗೆ ಸವದತ್ತಿ, ಸಂಜೆ 5 ಗಂಟೆಗೆ ಬೈಲಹೊಂಗಲಕ್ಕೆ ತೆರಳಿ ವಾಸ್ತವ್ಯಗೊಳ್ಳುವುದು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಜನೇವರಿ 11 ರಂದು ಮಧ್ಯಾಹ್ನ 12 ಗಂಟೆಗೆ ಚನ್ನಮ್ಮನ ಕಿತ್ತೂರಿಗೆ ಆಗಮಿಸಿ, ಅಲ್ಲಿಯೇ ವಾಸ್ತವ್ಯಗೊಳ್ಳುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುವು.
ವೀರಜ್ಯೋತಿ ಯಾತ್ರೆಯು ಜನೇವರಿ 12 ರಂದು ಬೆಳಿಗ್ಗೆ 9 ಗಂಟೆಗೆ ಸಂಗೊಳ್ಳಿ ತೆರಳಲಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 