ಸತೀಶ ಚೌಗುಲೆ ಜನ್ಮದಿನೋತ್ಸವ, ಸಮಾರೋಪ ಸಮಾರಂಭ
Satish Chowgule Birthday Celebration, Closing Ceremony
ರಾಯಬಾಗ, 30 : ತೆರೆ ಮರೆಯಲ್ಲಿ ಇದ್ದು ನಮ್ಮ ಜೀವನಕ್ಕೆ ಬೆಳಕಾಗಿರುವ ತಂದೆತಾಯಿಯನ್ನು ವೃದ್ಧಾಪ್ಯದಲ್ಲಿ ಜೋಪಾನವಾಗಿ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ ಎಂದು ಹಿರೇವಡ್ಡಟ್ಟಿ ಮಣಕವಾಡ ಅನ್ನದಾನಿಶ್ವರ ದೇವ ಮಂದಿರ ಮಹಾಮಠದ ಗುರು ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಗುರುವಾರ ಪಟ್ಟಣದ ಚೌಗುಲೆ ಕಾಲೇಜ ಆವರಣದಲ್ಲಿ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸತೀಶ ಚೌಗುಲೆ ಜನ್ಮದಿನೋತ್ಸವ ಹಾಗೂ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸಮಾಜ ನಮ್ಮನ್ನು ಗೌರವಿಸುವಂತೆ ನಾವು ಸಾಧನೆ ಮಾಡಬೇಕು. ನಮ್ಮ ಜೀವನ ಹೇಗೆ ರೂಪಿಸಿಕೊಳ್ಳಬೇಕೆಂದು ಕಲಿಸುವುದು ಶಿಕ್ಷಣ, ಅಂತಹ ಒಳ್ಳೆಯ ಶಿಕ್ಷಣವನ್ನು ಚೌಗುಲೆ ಶಿಕ್ಷಣ ಸಂಸ್ಥೆ ನೀಡುತ್ತಿರುವ ಅತ್ಯಂತ ಶ್ಲಾಘನೀಯವಾಗಿದೆ. ನಮ್ಮ ಯುವ ಪೀಳಿಗೆಗೆ ವಿಜ್ಞಾನಿಗಳು ಆದರ್ಶವಾಗಬೇಕೆಂದರು.ಜಮಖಂಡಿಯ ಓಲೆಮಠದ ಆನಂದ ದೇವರು, ಜುಂಜರವಾಡದ ಶಿವಲಿಂಗ ದೇವರು ಮಾತನಾಡಿದರು. ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಲ್.ಬಿ.ಚೌಗುಲೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷೆ ಭಾರತಿ ಚೌಗುಲೆ, ಕಾರ್ಯದರ್ಶಿ ವಿನಯ ಚೌಗುಲೆ, ಐಶ್ವರ್ಯ ಚೌಗುಲೆ, ಸಿದ್ದು ಚೌಗುಲೆ, ಪ್ರಾಚಾರ್ಯ ಎಸ್.ಎಸ್.ದಿಗ್ಗೆವಾಡಿ, ಎಸ್.ಎ.ನಾಂದಣಿ, ಎಸ್ ಎಸ್ ಕಾಡಾಪುರೆ, ಎಮ್.ಐ.ಬಡಿಗೇರ, ಶಿವಾಜಿ ಭೂಯಿ , ಸುರೇಶ ಶಿಂದೆ, ಆಶಾ ಕಾಂಬಳೆ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 