ಅಯ್ಯಪ್ಪ ದೇಗುಲ ಪ್ರವೇಶಿಸಲು ಕೊಚ್ಚಿ ತಲುಪಿದ ತೃಪ್ತಿ ದೇಸಾಯಿ
ಕೊಚ್ಚಿ, 26 ಭೂಮಾತಾ ಬ್ರಿಗೇಡ್ ಸಂಸ್ಥಾಪಕ ಮತ್ತು ಕಾರ್ಯಕತರ್ೆ ತೃಪ್ತಿ ದೇಸಾಯಿ ಶಬರಿಮಲೆ ಅಯ್ಯಪ್ಪ ದೇಗುಲವನ್ನು ಪ್ರವೇಶಿಸಲು ಸಜ್ಜಾಗಿದ್ದು, ಮಂಗಳವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೃಪ್ತಿಮ, ಸುಪ್ರೀಂಕೋಟರ್್ ತೀಪರ್ಿನ ಹಿನ್ನೆಲೆಯಲ್ಲಿ ಯಾವುದೇ ವಯಸ್ಸಿನ ಮಹಿಳೆಯರು ದೇಗುಲ ಪ್ರವೇಶಿಸಲು ಅನುಮತಿ ದೊರಕಿದ್ದು, ತಾವು ದೇವರದ ದರ್ಶನಕ್ಕೆ ಆಗಮಿಸಿರುವುದಾಗಿ ತಿಳಿಸಿದರು. ತೃಪ್ತಿ ದೇಸಾಯಿಯೊಂದಿಗೆ ಹರಿನಾಶಿನಿ ಕಾಂಬ್ಳೆ, ಛಾಯಾ, ಪಾಂಡುರಂಗ್ ಮತ್ತು ಮೀನಾಕ್ಷಿ ಶಿಂದೆ ಅವರೊಂದಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇಲ್ಲಿ ಅವರನ್ನು ಕಳೆದ ವರ್ಷ ಕನಕದುರ್ಗ ಅವರೊಂದಿಗೆ ದೇಗುಲ ಪ್ರವೇಶಿಸಿದ್ದ ಬಿನು ಅಮ್ಮಿನಿ ಸೇರಿಕೊಳ್ಳಲಿದ್ದಾರೆ. ವಿಮಾನ ನಿಲ್ದಾಣದಿಂದ ತೃಪ್ತಿ ದೇಸಾಯಿ ಕೊಚ್ಚಿ ನಗರ ಆಯುಕ್ತರ ಕಚೇರಿಯನ್ನು ತಲುಪಿದ್ದು, ದೇಗುಲ ಪ್ರವೇಶಕ್ಕೆ ರಕ್ಷಣೆ ಕೋರಿದ್ದಾರೆ. ಈ ನಡುವೆ, ಇರುಮಲೈ ನಿಂದ ದೇಗುಲದ ಚಾರಣದ ಹಾದಿಯಲ್ಲಿ ಆರ್ ಎಸ್ ಎಸ್ ನ ಹಿಂದು ಐಕ್ಯ ವೇದಿ ಮತ್ತು ಇತರ ಸಂಘಟನೆಗಳು ತೃಪ್ತಿ ದೇಸಾಯಿ ದೇಗುಲ ಪ್ರವೇಶಿಸುವುದನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ದೇಗುಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಹಲವು ಬಗೆಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 