ಶಾಲಾ ವಾರ್ಷಿಕೋತ್ಸವ ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ
School anniversary is a good platform for children's talents
ಹೂವಿನಹಡಗಲಿ 01: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಗಳು ಮಕ್ಕಳ ಪ್ರತಿಭೆಯನ್ನು ಹೊರ ತರಲು ಸಹಕಾರಿ. ಶಾಲೆಯಲ್ಲಿನ ಪ್ರತಿ ಪುರಸ್ಕರಿಸುವಂತಹ ಉತ್ತಮ ಕಾರ್ಯ ನಡೆಯುತ್ತಿದೆ ಎಂದು ಸಂಸ್ಥೆ ಗೌರವಾಧ್ಯಕ್ಷ ಹೆಚ್.ಎಂ.ಬೆಟ್ಟಯ್ಯ ಹೇಳಿದರು. ಪಟ್ಟಣದ ಮಲ್ಲಿಗೆ ವಿದ್ಯಾಸಂಸ್ಥೆ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ 26ನೇ ಶಾಲಾ ವಾರ್ಷಿಕೋತ್ಸವದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾಭಿವೃದ್ದಿಗೆ ಅನುವಾಗುವಂತೆ ಪೋಷಕರು ಶಿಕ್ಷಕರ ಜತೆ ಒಡನಾಟ ಇಟ್ಟುಕೊಳ್ಳಬೇಕೆಂದರು.ಡಾ.ಉಮರ್ ಮಾತನಾಡಿದರು. ವಿದ್ಯಾಸಂಸ್ಥೆ ಅದ್ಯಕ್ಷ ಕೆ.ಮೆಹಬೂಬ್ ಸುಬಾನ್ ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ ದೈಹಿಕ ಶಿಕ್ಷಣ ಪರಿ ವೀಕ್ಷಕ ರಫಿ ಅಹ್ಮದ್ ಖವಾಸ್, ಡಾ. ಉಮರ್, ಮಲ್ಲಿಗೆ ಕಲಾ ಸಂಸ್ಥೆ ಅದ್ಯಕ್ಷ ಎಲ್.ಖಾದರ್ ಬಾಷಾ, ಸಿಆರ್ ಪಿ. ವಿರೇಶ, ಖಲಂದರ್, ಶಿಕ್ಷಕ ಶೇಕ ಅಹ್ಮದ್, ಸಂಸ್ಥೆ ಕಾರ್ಯ ದರ್ಶಿ ಎಲ್.ಅಕ್ಬರ್, ನಿರ್ದೇಶಕ ರಾದಅರಿಪ್ ಬಾನು, ಹಸೀನಾ, ರಹಮಾನ್ ಸಾಬ್ ಇದ್ದರು. ಮು.ಗು. ಪರ್ವಿನ್ ತಾಜ್ ಸ್ವಾಗತಿಸಿದರು. ಶಿಕ್ಷಕಿ ಕೊಟ್ರಮ್ಮ ವಂದಿಸಿದರು. ನಂತರ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮನಸೂರೆ ಗೊಂಡಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 