ವಿದ್ಯಾರ್ಥಿಗಳಿಂದ ನೆರೆ ಸಂತ್ರಸ್ತ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ
ಲೋಕದರ್ಶನವರದಿ
ಮಹಾಲಿಂಗಪುರ31: ಸ್ಥಳೀಯ ಕೆಎಲ್ಇ ಡಿಪ್ಲೋಮಾ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾಥರ್ಿಗಳು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ನಂದಗಾವ ನೆರೆ ಸಂತ್ರಸ್ತ ಶಾಲೆಗಳಿಗೆ ಭೇಟಿ ನೀಡಿ ಕಿರುಸಹಾಯ ಮಾಡುವ ಮೂಲಕ ಸ್ಪಂದಿಸಿದರು.
ನಂದಗಾವ ಗ್ರಾಮದ ಬಹುತೇಕ ಮನೆಗಳು ಪ್ರವಾಹದ ನೀರಿನಲ್ಲಿ ಮುಳುಗಿದ ಪರಿಣಾಮ ವಿದ್ಯಾರ್ಥಿಗಳು ಸ್ಕೂಲ್ ಬ್ಯಾಗ್ ನೀರುಪಾಲಾಗಿದ್ದವು. ಇದನ್ನು ಮನಗಂಡ ಕೆಎಲ್ಇ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗದ ವಿದ್ಯಾಥರ್ಿಗಳು ಹಾಗೂ ಸಿಬ್ಬಂದಿ ಅಂಥ 45 ಕಡು ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಎಲ್ಲರಿಗೂ ಶಾಲಾ ಬ್ಯಾಗ್ ವಿತರಿಸಿದರು.
ಕಾಲೇಜಿನ ಪ್ರಾಚಾರ್ಯ ಎಸ್.ಐ ಕುಂದಗೋಳ, ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಉಮೇಶ ಹಾದಿಮನಿ, ವಿಭಾಗದ ಸಿಬ್ಬಂದಿ ರಾಚಣ್ಣ ಕಾಳಗಿ, ವಿಶಾಲ ಮೆಟಗುಡ್ಡ, ಪ್ರಕಾಶ ಬಡಿಗೇರ, ಪ್ರವೀಣ ಅವರಾದಿ, ವಿನಯ ಕಮ್ಮಾರ, ಚನ್ನಪ್ಪ ಬಡಿಗೇರ, ಶಂಕರ ಮಾಳಿ, ಮಹಾಲಿಂಗ ಬೆಳ್ಳಿ ಹಾಗೂ ಮೆಕಾನಿಕಲ್ ವಿಭಾಗದ 71 ವಿದ್ಯಾರ್ಥಿಗಳು ಇದ್ದರು
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 