2020 ರ ವಿಶ್ವ ಆಹಾರ ಪ್ರಶಸ್ತಿಗೆ ವಿಜ್ಞಾನಿ ರತ್ತನ್ ಲಾಲ್ ಆಯ್ಕೆ
ಭಾರತ ಸಂಜಾತ ಅಮೆರಿಕದ ಮಣ್ಣಿನ ವಿಜ್ಞಾನಿ ರತ್ತನ್ ಲಾಲ್ ಅವರನ್ನು ಈ ವರ್ಷದ ವಿಶ್ವ ಆಹಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಹಾರ ಉತ್ಪಾದನೆ ಹೆಚ್ಚಳಕ್ಕೆ ಪಾಕೃತಿ ಸಂಪನ್ಮೂಲಗಳ ರಕ್ಷಣೆಯ ಜತೆಗೆ ಹವಾಮಾನ ಬದಲಾವಣೆ ತಗ್ಗಿಸುವಲ್ಲಿ ಮಣ್ಣಿನ ಪ್ರಾಮುಖ್ಯತೆಯ ಬಗ್ಗೆ ಇವರ ಪ್ರಮುಖ ಸಂಶೋಧನೆಗೆ ಈ ಪ್ರಶಸ್ತಿ ನೀಡಲಾಗಿದೆ. ಐದು ದಶಕಗಳಿಗೂ ಹೆಚ್ಚು ಕಾಲ ನಾಲ್ಕು ಖಂಡಗಳಲ್ಲಿನ ಇವರ ಕೊಡುಗೆ ಗುರುತಿಸಿ ನೀಡಲಾಗಿರುವ ಈ ಪ್ರಶಸ್ತಿ 2.5 ಲಕ್ಷ ಡಾಲರ್ ಮೊತ್ತದ್ದಾಗಿದೆ. ಭಾರತ ಮೂಲದ ಲಾಲ್, ಅಮೆರಿಕದ ಪ್ರಜೆಯಾಗಿದ್ದಾರೆ.
ಮಣ್ಣಿನ ಸಂರಕ್ಷಣಾ ವಿಧಾನಗಳ ಮೂಲಕ 50 ಕೋಟಿ ರೈತರ ಜೀವನ ಸುಧಾರಿಸಬಹುದಾಗಿದೆ, 2 ಶತಕೋಟಿಗೂ ಹೆಚ್ಚು ಜನರಿಗೆ ಆಹಾರ ಮತ್ತು ಪೌಷ್ಠಿಕಾಂಶ ಭದ್ರತೆ ಒದಗಿಸುವ ಜೊತೆಗೆ ಲಕ್ಷಾಂತರ ಹೆಕ್ಟೇರ್ ಪ್ರದೇಶದ ಫಲವತ್ತತೆ ಕಾಪಾಡಿಕೊಳ್ಳಬಹುದಾಗಿದೆ ಎಂದು ಅವರು ತೋರಿಸಿಕೊಟ್ಟಿದ್ದರು.ಪ್ರಸ್ತುತ ಲಾಲ್ ಅವರು ಓಹಿಯೋ ವಿಶ್ವವಿದ್ಯಾಲಯದ ಇಂಗಾಲ ನಿರ್ವಹಣೆ ಕೇಂದ್ರದ ಸಂಸ್ಥಾಪಕರು ಮತ್ತು ಮಣ್ಣು ವಿಜ್ಞಾನದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 