ಸಚಿವ ಬೆಂಗಾಲು ವಾಹನಕ್ಕೆ ಸ್ಕೂಟಿ ಡಿಕ್ಕಿ
Scooter rams into Minister Bengalu's vehicle
ಕಾರವಾರ 04 : ಆರೋಗ್ಯ ಸಚಿವ ಯು.ಟಿ .ಖಾದರ್ ಅವರು ಕಾರವಾರ ದಿಂದ ಉಡುಪಿ ಕಡೆಗೆ ತೆರಳುವಾಗ , ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದೆ. ಅಂಕೋಲಾ ಸನಿಹ ಬಾಳೆಗುಳಿ ಎಂಬಲ್ಲಿ ಹೆದ್ದಾರಿ ಮೇಲೆ ವರದರಾಜ ಹೋಟೆಲ್ ಬಳಿ ಅಪಘಾತ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.ಸ್ಕೂಟಿ ಸವಾರ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.ಅಪಘಾತವಾಗುತಿದ್ದಂತೆ ವಿಷಯ ಅರಿತ ಸಚಿವರು ಸ್ವತಃ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲಗೇರಿ ಮೂಲದ ಸಂದೀಪ್ ನಾಯಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವ.ಅಂಕೋಲಾ ಪಟ್ಟಣದ ಆರ್ಯ ಮೆಡಿಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು ,ತಲೆಗೆ ಪೆಟ್ಟಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 