ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಬೈಲಹೊಂಗಲ: ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವದರಿಂದ ಹಲವಾರು ಪ್ರಯೋಜನಗಳಿವೆ ಎಂದು ಬೈಲಹೊಂಗಲ ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಸಮೀರ ಮುಲ್ಲಾ ಹೇಳಿದರು.
ತಾಲೂಕಿನ ನೇಸರಗಿ ಗ್ರಾಮದ ಸರಕಾರಿ ಕುವೆಂಪು ಮಾದರಿ ಶಾಲೆಯಲ್ಲಿ ಬುಧುವಾರ ಆರೋಗ್ಯ ಇಲಾಖೆ, ಜಿ.ಪಂ ಬೆಳಗಾವಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಗ್ರಾ.ಪಂ ಅವರ ಆಶ್ರಯದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿ, ರಕ್ತದಾನ ಮಾಡುವದರಿಂದ ರಕ್ತ ಶುದ್ಧವಾಗುತ್ತದೆ. ದೇಹವನ್ನು ಸದೃಡಗೊಳಿಸುತ್ತದೆ. ರಕ್ತದ ಸೆಲ್ಸ್ಗಳು ಹೆಚ್ಚಾಗಲು ಕಾರಣವಾಗುತ್ತದೆ. ರಕ್ತದ ಕೊರತೆ ಇರುವವರಿಗೆ ರಕ್ತದಾನದಿಂದ ಸಹಕಾರಿ ಎಂದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದನ್ನವರ ಮಾತನಾಡಿ, ಎಲ್ಲ ದಾನಗಳಲ್ಲಿ ರಕ್ತದಾನ ಅತ್ಯಂತ ಶ್ರೇಷ್ಠವಾಗಿದೆ. ಪ್ರತಿಯೊಬ್ಬರು ರಕ್ತದಾನ ಮಾಡಲು ಮುಂದಾಗಬೇಕು. ಜೀವನಮರಣದಿಂದ ಹೋರಾಡುವ ವ್ಯಕ್ತಿಗೆ ರಕ್ತ ಬಹುಮುಖ್ಯವಾಗುತ್ತದೆ ಎಂದರು.
ಜಿ.ಪಂ ಸದಸ್ಯ ನಿಂಗಪ್ಪ ಅರಕೇರಿ, ಗ್ರಾ.ಪಂ ಉಪಾಧ್ಯಕ್ಷೆ ಗಿರಿಜಾ ಗಲಬಿ, ಮುಖ್ಯ ಶಿಕ್ಷಕ ಬಿ.ವಾಯ್.ಬಾಗಲೆ, ಡಾ.ಹೇಮಲತಾ, ಡಾ.ಶ್ರೀದೇವಿ ಬೊಪಾಚೆ, ಪಿಡಿಓ ಸೌಮ್ಯಾ, ವಾಯ್.ಎ.ದಂಡಾಪೂರ, ಈಶ್ವರ ತುಳಜನ್ನವರ, ಬಸವರಾಜ ಪಂಗನ್ನವರ, ಆಶಾ, ಅಂಗನವಾಡಿ ಕಾರ್ಯಕತರ್ೆಯರು ಪಾಲ್ಗೊಂಡಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 