ಸರಣಿ ಅಪಘಾತ: ಮೂವರಿಗೆ ಗಾಯ
ಬೆಂಗಳೂರು, ಫೆ 10 : ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಯಶವಂತಪುರ ರೈಲು ನಿಲ್ದಾಣದ ಬಳಿ ಸಂಭವಿಸಿದೆ.
ಕುಡಿದ ಮತ್ತಿನಲ್ಲಿದ್ದ ಮಿನಿ ಬಸ್ ಚಾಲಕನೋರ್ವ ರಸ್ತೆ ಬದಿಯಲ್ಲಿದ್ದ ಆಟೋಗಳಿಗೆ ಡಿಕ್ಕಿ ಹೊಡೆದು ಅವಾಂತರ ಸೃಷ್ಟಿಸಿದ್ದಾನೆ.
ಗೊರೆಗುಂಟೆ ಪಾಳ್ಯ ಕಡೆಯಿಂದ ಸಿಟಿ ಕಡೆಗೆ ಬರುತ್ತಿದ್ದ ಮಿನಿ ಬಸ್ಸು ಚಾಲಕ ವೆಂಕಟಸ್ವಾಮಿ, ಕುಡಿದ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂರು ಆಟೋಗಳು ಜಖಂ ಆಗಿದ್ದು ಚಾಲಕರಿಗೆ ತಲೆ, ಕಾಲು, ಕೈ ಭಾಗಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅದೃಷ್ಟವಶಾತ್ ಬಸ್ಸಿನಲ್ಲಿ ಯಾರೂ ಇರದ ಪರಿಣಾಮ ಅನಾಹುತವೊಂದು ತಪ್ಪಿದಂತಾಗಿದೆ. ಚಾಲಕ ವೆಂಕಟ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 