ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜು ಕಟ್ಟಿದ್ದ ಏಳು ಜನರ ಬಂಧನ
ಉಡುಪಿ, ಏಪ್ರಿಲ್ 7,ಜಿಲ್ಲೆಯ ಕಾವಡಿ ಮಹಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ನಡೆದಿದ್ದ ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜಾಡುತ್ತಿದ್ದ 7 ಜನರನ್ನು ಕೋಟಾ ಪೊಲೀಸರು ಬಂಧಿಸಿ ಅವರಿಂದ 1.72 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮಧುಕರ್ (33), ಜಯರಾಮ್ ಶೆಟ್ಟಿ (49), ಪ್ರಶಾಂತ್ (42), ರಾಘವೇಂದ್ರ (39), ಲೋಕೇಶ್ ಬಾರ್ಕೂರ್ (35), ಸುಧಾಕರ್ (39) ಮತ್ತು ಸುಕೇತ್ (29) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯಂತೆ ಪೊಲೀಸರು ಆ ಪ್ರದೇಶದ ಮೇಲೆ ದಾಳಿ ನಡೆಸಿ ಸೋಮವಾರ ಸಂಜೆ ಈ ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 6,880 ರೂ. ನಗದು, ಎರಡು ಹುಂಜಗಳು ಹಾಗೂ ಎಂಟು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳದಿಂದ ಇಬ್ಬರು ವ್ಯಕ್ತಿಗಳು ತಮ್ಮ ವಾಹನಗಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯಡಿ ಮತ್ತು ಕೋಳಿಅಂಕ ವಿರುದ್ಧ ಸುಪ್ರೀಂಕೋರ್ಟ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಕೋಳಿಅಂಕ ಜೂಜಾಟವಾಗಿದ್ದು, ಇದರಲ್ಲಿ ಕೋಳಿಗಳ ಕಾಲುಗಳಿಗೆ ಹರಿತ ಚಾಕುಗಳನ್ನು ಕಟ್ಟಲಾಗುತ್ತದೆ. ಕೋಳಿಗಳು ಪರಸ್ಪರ ಹೊಡಾಡಿಕೊಳ್ಳುವಾಗ ಚಾಕುವಿನಿಂದ ತೀವ್ರವಾಗಿ ಗಾಯಗೊಂಡ ಕೋಳಿ ಸೋಲನ್ನಪ್ಪುತ್ತದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 