ಗದಗ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ: ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಸಚಿವ ಬಸವರಾಜ ರಾಯರೆಡ್ಡಿ ಸೂಚನೆ

ಗದಗ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ: ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಸಚಿವ ಬಸವರಾಜ ರಾಯರೆಡ್ಡಿ ಸೂಚನೆ  Severe drought situation in Gadag district: Minister Basavaraj Rayareddy directs officials to expedi

ಗದಗ, ಆ.7: ಗದಗ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳಂತೆ ಅಗತ್ಯ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಜಿಲ್ಲಾ ಅಧಿಕಾರಿಗಳಿಗೆ ಸಚಿವ ಸಂಪುಟ ದರ್ಜೆಯ ಸಚಿವ ಬಸವರಾಜ ರಾಯರೆಡ್ಡಿ ಸೂಚಿಸಿದರು.  ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬರ ಪರಿಸ್ಥಿತಿ ಪರೀಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಳೆ ಕೊರತೆ, ಬೆಳೆ ಹಾನಿ, ಕುಡಿಯುವ ನೀರು, ಉದ್ಯೋಗ ಖಾತರಿ ಹಾಗೂ ರೈತರ ಪರಿಹಾರ ಕುರಿತಂತೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿರುವುದಾಗಿ ತಿಳಿಸಿದರು.