ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಲೋಕದರ್ಶನ ವರದಿ
ಮುಂಡಗೋಡ 16: ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಮದುವೆ ಯಾಗುವುದಾಗಿ ಪ್ರಮಾಣಮಾಡಿ ತಲೆ ಮರೆಸಿಕೊಂಡಿದ್ದ ನಿಜವಾದ ಆರೋಪಿ ಮಂಜುನಾಥ ತಳವಾರ ಗುರುವಾರ ಮುಂಡಗೋಡ ಪೊಲೀಸರು ಬಂದಿಸಿದ್ದಾರೆ
ಅಪ್ರಾಪ್ತೆಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಬಗ್ಗೆ ನವಂಬರ 2ರಂದು ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನವಂಬರ 2ರಂದು ಪೊಲೀಸ್ ಠಾಣೆಯಲ್ಲಿ ಮಳಗಿ ಗ್ರಾಮದ ಸಂತೋಷ ಹುಲ್ಲೂರ(23) ಎಂಬ ಯುವಕನ ವಿರುದ್ಧ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದರು.
ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡು ಯಲ್ಲಾಪುರ ಸಿ.ಪಿ.ಐ. ಡಾ.ಮಂಜುನಾಥ ನಾಯ್ಕ ಮತ್ತು ಇಲ್ಲಿನ ಪ್ರಭಾರ ಪಿಎಸ್ಆಯ್ ಚಂದ್ರಶೇಖರ ಹರಿಹರ ಸಂತೋಷ ಹುಲ್ಲೂರನ ವಿಚಾರಣೆಗೊಳಪಡಿಸಿದಾಗ ಇವನು ಈ ಕೃತ್ಯ ಮಾಡಿರಲಿಕ್ಕಿಲ್ಲಾ ಎಂಬ ಅನುಮಾನ ಮೂಡಿ ಬಂದಿದೆ.
ಸಂಶಯದ ಸುಳಿಯನ್ನು ಬೆನ್ನುಹತ್ತಿದ ಪೊಲೀಸರು ಬೇರೊಬ್ಬನ ಕೈವಾಡವಿರುವ ಬಗ್ಗೆ ಕೆಲ ಗ್ರಾಮಸ್ಥ ರಿಂದ ತಿಳಿದು ಬಂದು ಮಳಗಿ ಗ್ರಾಮದ ವಿವಾಹಿತ ಮಂಜುನಾಥ ತಳವಾರ(22)ನ ಈ ಕೃತ್ಯವನ್ನು ಮಾಡಿದ್ದಾನೆಂದು ಖಾತ್ರಿಪಡಿಸಿಕೊಂಡು ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಮತ್ತು ಸಂತ್ರಸ್ತೆಯೂ ಮಂಜುನಾಥನ ಹೆಸರನ್ನು ಒಪ್ಪಿಕೊಂಡಾಗ ಪ್ರಕರಣಕ್ಕೆ ಅಂತಿಮ ತೆರೆ ಎಳೆದಂತಾಯಿತು.
ಆರೋಪಿ ಮಂಜುನಾಥ ತಳವಾರನನ್ನು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 