ಶಾರದ ಚಿಟ್ ಫಂಡ್ ಹಗರಣ: ರಾಜೀವ್ ಕುಮಾರ್ ಜಾಮೀನು ಅರ್ಜಿ ವಜಾ
ಬರಾಕ್ಪೋರ್ ಸೆ 17 ಬಹುಕೋಟಿ ಶಾರದ ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ವಿಭಾಗದ ಎಡಿಜಿ ಅಧಿಕಾರಿ ರಾಜೀವ್ ಕುಮಾರ್ ಅವರ ಜಾಮೀನು ಮನವಿಯನ್ನು ಬರಾಸತ್ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿ, ಇದು ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಹೊಂದಿಲ್ಲ ಎಂದೂ ಅಭಿಪ್ರಾಯಪಟ್ಟಿದೆ.
ಸಂಸದರು ಮತ್ತು ಶಾಸಕರಿಗೆ ಮಾತ್ರ ಸೀಮಿವಾದ ವಿಚಾರಣಾ ನ್ಯಾಯಾಲಯವಾಗಿದೆ ಆದ್ದರಿಂದ ಕುಮಾರ್ ಅವರು ಜಿಲ್ಲಾ ಇಲ್ಲವೆ ಸೆಷನ್ಸ್ ನ್ಯಾಯಾಲಯಕ್ಕೆ ಹೋಗಬಹುದು ಎಂದೂ ಸಲಹೆ ಮಾಡಿದೆ. ಆದರ ಪ್ರಕಾರ ಕುಮಾರ್ ಅವರ ವಕೀಲರು ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ ಎಂದೂ ವರದಿಯಾಗಿದ್ದು,ಬಂಧನ ಬೀತಿ ಎದುರಾಗಿದೆ.ಆದರೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ತನ್ನ ಮುಂದೆ ವಿಚಾರಣೆಗೆ ಹಾಜರಾಗಬೇಕಿರುವ ಹಿರಿಯ ಐಪಿಎಸ್ ರಾಜೀವ್ ಕುಮಾರ್ ಎಲ್ಲಿದ್ದಾರೆ ಎಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಹಾಯ ಮಾಡುವಂತೆ ಸಿಬಿಐ ಪಶ್ಚಿಮ ಬಂಗಾಳ ಸರ್ಕಾರವನ್ನು ಕೋರಿದೆ.
ಬಹುಕೋಟಿ ಶಾರದ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ, ಕೊಲ್ಕತ್ತಾ ಹೈಕೋರ್ಟ್ ಆದೇಶದಂತೆ ವಿಚಾರಣೆ ನೆಡಸಲು ತನ್ನ ಮುಂದೆ ಹಾಜರಾಗುವಂತೆ ರಾಜೀವ್ ಕುಮಾರ್ ಅವರಿಗೆ ತಾಕೀತು ಮಾಡಿದೆ. ಸಮನ್ಸ್ ನೋಟೀಸ್ ಗಳನ್ನು ಧಿಕ್ಕರಿಸಿರುವ ಮಾಜಿ ಪೊಲೀಸ್ ಅಧಿಕಾರಿ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸುವಂತೆ ಬರಾಸತ್ ನ್ಯಾಯಾಲಯವನ್ನು ಕೋರಿದೆ.
ಸಿಬಿಐ ವಿಚಾರಣೆಯಿಂದ ತಕ್ಷಣದ ಪರಿಹಾರ ಪಡೆಯಲು ಪೊಲೀಸ್ ಅಧಿಕಾರಿ ಮುಂದಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಗೆ ಕೇವಿಯಟ್ ಹಾಕಲು ಸಿಬಿಐ ಚಿಂತನೆ ಮಾಡುತ್ತಿದೆ ಎಂದೂ ಹೇಳಲಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 