ಸಂಜಯ್ ರಾವತ್ ಆರೋಗ್ಯ ವಿಚಾರಿಸಿದ ಶರದ್ ಪವಾರ್
ಮುಂಬೈ, ನ 12 : ಅಸ್ವಸ್ಥತೆಯಿಂದಾಗಿ ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಅವರನ್ನು ಮಂಗಳವಾರ ಬೆಳಗ್ಗೆ ಎನ್ ಸಿ ಪಿ ಪರಮೋಚ್ಛ ನಾಯಕ ಶರದ್ ಪವಾರ್ ಭೇಟಿ ಮಾಡಿ ಆರೋಗ್ಯ ಕುರಿತು ವಿಚಾರಿಸಿದರು. ಸೋಮವಾರ ಅಪರಾಹ್ನ ಸ್ವಲ್ಪ ಎದೆ ನೋವು ಕಾಣಿಸಿಕೊಂಡ ಕೂಡಲೇ ರಾವತ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿಯಮಿತ ಆರೋಗ್ಯ ತಪಾಸಣೆಗಾಗಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ರಾವತ್ ಬಂದಿದ್ದಾಗ, ಇಸಿಜಿ ಪರೀಕ್ಷೆಯ ನಂತರ ಹೆಚ್ಚಿನ ಪರೀಕ್ಷೆಗಳಿಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದರು ಎಂದು ಲೀಲಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅಲ್ಲದೆ, ರಾವತ್ ಅವರನ್ನು ಭೇಟಿಯಾಗಲು ಶರದ್ ಪವಾರ್ ಆಸ್ಪತ್ರೆ ಬಳಿ ಆಗಮಿಸುತ್ತಿದ್ದಂತೆಯೇ ನೂರಾರು ಮಾಧ್ಯಮಗಳ ಪ್ರತಿನಿಧಿಗಳು ಅವರನ್ನು ಸುತ್ತುವರಿದ ಕಾರಣ ಅವರ ಕೆಲಕಾಲ ಗೊಂದಲವಾಗಿ ಪರಿಣಮಿಸಿತು. ಸರ್ಕಾರ ರಚನೆಗೆ ಕಾಂಗ್ರೆಸ್ ಕಡೆಯಿಂದ ಅಡ್ಡಿಯಾಗುತ್ತಿದೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ, ಕಾಂಗ್ರೆಸ್ ಜೊತೆ ನಾನು ಮಾತನಾಡುತ್ತೇನೆ ಎಂದಷ್ಟೇ ಪವಾರ್ ಉತ್ತರಿಸಿದರು. ಕಾಂಗ್ರೆಸ್ ಮತ್ತು ಎನ್ಸಿಪಿ ನಡುವೆ ಇಂದು ಸಭೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಸಭೆ ನಡೆಯಲಿದೆ ಎಂದು ಯಾರು ಪ್ರಕಟಿಸಿದ್ದಾರೆ? ಎಂದು ಮರು ಪ್ರಶ್ನಿಸಿದ ಪವಾರ್, ಸಭೆಯ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಉತ್ತರಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 