ಶರದ್ ಪವಾರ್ ಗೆ ಡಾಕ್ಟರೇಟ್ ನೀಡಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠಾವಾಡ ವಿಶ್ವವಿದ್ಯಾಲಯ ನಿರ್ಧಾರ
ಔರಂಗಾಬಾದ್, ಫೆ 5, ಎನ್ ಸಿ ಪಿ ಪರಮೋಚ್ಛ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠಾವಾಡ ( ಬಿಎಎಂಯು) ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರು ನಿರ್ಧರಿಸಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ಡಾ. ಪ್ರಮೋದ್ ಯಿಯೋಲೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ, ಸದಸ್ಯ ಡಾ. ನರೇಂದ್ರ ಕಾಳೆ ಮಂಡಿಸಿದ ಪ್ರಸ್ತಾವನೆಗೆ ಒಮ್ಮತದ ಅನುಮೋದನೆ ನೀಡಲಾಯಿತು.ಮಾರ್ಚ್ 13 ರಂದು ನಡೆಯಲಿರುವ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರ ಮುಂದೆ ಪ್ರಸ್ತಾವನೆ ಇರಿಸಲಾಗುತ್ತದೆ. ಸೆನೆಟ್ ಅನುಮೋದನೆ ನೀಡಿದ ನಂತರ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ರಾಜ್ಯದ ವಿಶ್ವವಿದ್ಯಾಲಯಗಳ ಕಲಾಧಿಪತಿಗಳಾಗಿರುವ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ರವಾನಿಸಲಾಗುವುದು ಎಂದು ವಿವಿ ಮೂಲಗಳು ಹೇಳಿವೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 