ಶಿಂದೋಗಿ ಗ್ರಾ.ಪಂ. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ
ಲೋಕದರ್ಶನ ವರದಿ
ಮುನವಳ್ಳಿ: ನ. 16 ರಂದು ಸಾಯಂಕಾಲ ಸಮೀಪದ ಶಿಂದೋಗಿ ಗ್ರಾಮದ ಬಸವನಗರದ ನಿವಾಸಿಗಳು ಗ್ರಾಮ ಪಂಚಾಯತಿಗೆ ನೂತನವಾಗಿ ಅಧ್ಯಕ್ಷ,ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸತ್ಯಪ್ಪ ಅಡವಿ ಹಾಗೂ ಶ್ರೀಮತಿ ಸುವಣರ್ಾ ನಡನಳ್ಳಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಬಸವನಗರದ ನಿವಾಸಿ ಶಿವಾನಂದ ಮೇಟಿ ಮಾತನಾಡಿ ಇಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದೆ ಅದನ್ನು ಕೂಡಲೇ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಬಡಾವಣೆಯಲ್ಲಿ ಬೀದಿದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಮತ್ತು ಗಣಪತಿ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ. ಚಿದಾನಂದ ಕಮತಿ, ಮಂಜುನಾಥ ಭಂಡಾರಿ, ದ್ಯಾಮನಗೌಡ ಬಕಾಡೆ ವ್ಹಿ. ಎಫ್. ಚಿಕ್ಕಮಠ. ಮನೋಹರ ನಾಯ್ಕ ಸೇರಿದಂತೆ ಇತರರು ಇದ್ದರು
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 