‘ಒಗ್ಗಟ್ಟಿನ ಭಾರತ’ ಬಿಂಬಿಸಲು ಭಾನುವಾರ ದೀಪಗಳನ್ನು ಬೆಳಗಿಸಿ-ಪ್ರಧಾನಿ
ನವದೆಹಲಿ, ಏಪ್ರಿಲ್ 3, ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಒಗ್ಗಟ್ಟಿನ ಭಾರತದ ಚಿತ್ರಣ ಬಿಂಬಿಸಲು ಮತ್ತು ಅಂಧಕಾರ ಕೊನೆಗೊಳಿಸಲು ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ವಿದ್ಯುತ್ ದೀಪಗಳನ್ನು ಸ್ವಿಚ್ ಆಫ್ ಮಾಡಿ ದೀಪಗಳು, ಮೇಣದ ಬತ್ತಿಗಳನ್ನು ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದಾರೆ.
ಶುಕ್ರವಾರ ವೀಡಿಯೊ ಸಂದೇಶದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, 'ಈ ಭಾನುವಾರ, ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ನಿಮ್ಮ ಬಾಗಿಲು ಅಥವಾ ಬಾಲ್ಕನಿಯಲ್ಲಿ 9 ನಿಮಿಷಗಳ ಕಾಲ ಮೇಣದ ಬತ್ತಿ, ದೀಪ, ಟಾರ್ಚ್ ಅಥವಾ ನಿಮ್ಮ ಫೋನ್ನ ಬ್ಯಾಟರಿ ಬೆಳಕನ್ನು ಬೆಳಗಿಸಿ. ಕೊರೊನವೈರಸ್ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಒಬ್ಬಂಟಿಯಾಗಿಲ್ಲ ಎಂಬ ವಿಶ್ವಾಸವನ್ನು ಇದು ನಮ್ಮೆಲ್ಲರಿಗೂ ನೀಡುತ್ತದೆ.’ ಎಂದು ಹೇಳಿದ್ದಾರೆ. ಇದೇ ಸಮಯದಲ್ಲಿ ಜನರು ತಮ್ಮ ಮನೆಗಳ ಹೊರಗೆ ಜಮಾಯಿಸಬಾರದು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಮಾರ್ಚ್ 22ರಂದು ಕರೆ ನೀಡಲಾಗಿದ್ದ ಜನತಾ ಕರ್ಫ್ಯೂ ವೇಳೆ ಇದೇ ರೀತಿ ಜನರು ಮನೆ ಮುಂದೆ ಬಂದು ಚಪ್ಪಾಳೆ, ಜಾಗಟೆ ಬಾರಿಸಬೇಕೆಂಬ ಪ್ರಧಾನಿಯವರ ಮನವಿಗೆ ಉತ್ತಮ ಸ್ಪಂದನೆ ದೊರೆತಿತ್ತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 