ಅಜಿತ್ ಪವಾರ್ ಗೆ ಶಿವಸೇನೆ ಬಿಗ್ ಆಫರ್ ...!
ಮುಂಬೈ, 25 ದಿನದಿಂದ ದಿನಕ್ಕೆ ಬದಲಾಗುತ್ತಿರುವ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಇಂದು ಮತ್ತೊಂದು ಕುತೂಹಲಕಾರಿ ತಿರುವು ಪಡೆದುಕೊಳ್ಳುತ್ತಿದೆ. ಎನ್ ಸಿ ಪಿ ಗೆ ಎರಡೂವರೆ ವರ್ಷ ಗಳ ಕಾಲ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಾನು ಸಿದ್ಧ ಎಂದು ಹೊಸ ಮಿತ್ರ ಪಕ್ಷ ಶಿವಸೇನಾ ಸಿದ್ದವಾಗಿದೆ ಎಂದು ವರದಿಯಾಗಿದೆ. ಯಾರು ಊಹೆಮಾಡದ ರೀತಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಸರಿ ದಾರಿಗೆ ತರಲು, ಬಿಜೆಪಿ ಹಿಡಿತದಿಂದ ಅವರನ್ನು ಹೊರತರಲು ಶಿವಸೇನೆ ಈ ಪ್ರಸ್ತಾಪ ಮುಂದಿಟ್ಟಿದೆ ಎನ್ನಲಾಗಿದೆ. ಅಜಿತ್ ಪವಾರ್ ಅವರಿಗೆ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ನೀಡುವ ಮೂಲಕ ಅವರನ್ನು ಸಂತೃಪ್ತಿ ಪಡಿಸಲು ಪ್ರಯತ್ನಿಸುತ್ತಿದೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಕೈಗೊಂಡಿರುವ ನಿರ್ಣಯವನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್ ಮತ್ತು ಎನ್ಸಿಪಿ ಸುಪ್ರೀಂ ಕೋಟರ್್ ಮೊರೆ ಹೋಗಿರುವ ನಡುವೆಯೇ ಮಿತ್ರ ಪಕ್ಷ ಶಿವಸೇನೆ ಈ ನಿರ್ಣಯಕ್ಕೆ ಬಂದಿರುವುದು ಗಮನಾರ್ಹ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 