ಅಜಿತ್ ಪವಾರ್ ಗೆ ಶಿವಸೇನೆ ಬಿಗ್ ಆಫರ್ ...!
ಮುಂಬೈ, 25 ದಿನದಿಂದ ದಿನಕ್ಕೆ ಬದಲಾಗುತ್ತಿರುವ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಇಂದು ಮತ್ತೊಂದು ಕುತೂಹಲಕಾರಿ ತಿರುವು ಪಡೆದುಕೊಳ್ಳುತ್ತಿದೆ. ಎನ್ ಸಿ ಪಿ ಗೆ ಎರಡೂವರೆ ವರ್ಷ ಗಳ ಕಾಲ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಾನು ಸಿದ್ಧ ಎಂದು ಹೊಸ ಮಿತ್ರ ಪಕ್ಷ ಶಿವಸೇನಾ ಸಿದ್ದವಾಗಿದೆ ಎಂದು ವರದಿಯಾಗಿದೆ. ಯಾರು ಊಹೆಮಾಡದ ರೀತಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಸರಿ ದಾರಿಗೆ ತರಲು, ಬಿಜೆಪಿ ಹಿಡಿತದಿಂದ ಅವರನ್ನು ಹೊರತರಲು ಶಿವಸೇನೆ ಈ ಪ್ರಸ್ತಾಪ ಮುಂದಿಟ್ಟಿದೆ ಎನ್ನಲಾಗಿದೆ. ಅಜಿತ್ ಪವಾರ್ ಅವರಿಗೆ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ನೀಡುವ ಮೂಲಕ ಅವರನ್ನು ಸಂತೃಪ್ತಿ ಪಡಿಸಲು ಪ್ರಯತ್ನಿಸುತ್ತಿದೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಕೈಗೊಂಡಿರುವ ನಿರ್ಣಯವನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್ ಮತ್ತು ಎನ್ಸಿಪಿ ಸುಪ್ರೀಂ ಕೋಟರ್್ ಮೊರೆ ಹೋಗಿರುವ ನಡುವೆಯೇ ಮಿತ್ರ ಪಕ್ಷ ಶಿವಸೇನೆ ಈ ನಿರ್ಣಯಕ್ಕೆ ಬಂದಿರುವುದು ಗಮನಾರ್ಹ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 