ಬಿಜೆಪಿ ನಾಯಕತ್ವದ ನಿರ್ಧಾರವನ್ನು ಶಿವಸೇನಾ ಬೆಂಬಲಿಸುತ್ತದೆ: ಏಕನಾಥ ಶಿಂದೆ
ಏಕನಾಥ ಶಿಂದೆ
ಮುಂಬೈ 27: ಮುಂದಿನ ಮುಖ್ಯಮಂತ್ರಿ ಆಯ್ಕೆಯಲ್ಲಿ ಬಿಜೆಪಿ ನಾಯಕತ್ವದ ನಿರ್ಧಾರವನ್ನು ಶಿವಸೇನಾ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಅಲ್ಲದೆ ಸಿಎಂ ಆಯ್ಕೆ ವಿಚಾರದಲ್ಲಿ ಅಡ್ಡಿಯಾಗುವುದಿಲ್ಲ ಎಂದು ಏಕನಾಥ ಶಿಂದೆ ಬುಧವಾರ ಸ್ಪಷ್ಟಪಡಿಸಿದ್ದಾರೆ.
ಠಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಏಕನಾಥ ಶಿಂದೆ, 'ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಲ್ಲದೆ ಮೋದಿ, ಶಾ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂಬ ಭರವಸೆ ಕೊಟ್ಟಿದ್ದೇನೆ' ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 'ಮಹಾಯುತಿ' ಮೈತ್ರಿ ಭರ್ಜರಿ ಜಯ ಗಳಿಸಿದರೂ ಎರಡನೇ ಅವಧಿಗೆ ಎಂದು ವರದಿಯಾಗಿತ್ತು.
ಸಿಎಂ ಸ್ಥಾನ ಸಿಗದಿರುವುದಕ್ಕೆ ಏಕನಾಥ ಶಿಂದೆ ನಿರಾಶೆಗೊಂಡಿದ್ದಾರೆ ಎಂಬ ವದಂತಿಗಳನ್ನು ತಳ್ಳಿ ಹಾಕಿರುವ ಶಿಂದೆ, 'ಯಾರೂ ಅಸಮಾಧಾನಗೊಂಡಿಲ್ಲ. ನಾವೆಲ್ಲರೂ ಮಹಾಯುತಿ ಮೈತ್ರಿಕೂಟದ ಭಾಗವಾಗಿ ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ' ಎಂದು ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 