ಕಣ ಕಣದಲ್ಲಿಯೂ ಶಿವ ವಿಶಿಷ್ಠ ಕಾರ್ಯಕ್ರಮ
ಲೋಕದರ್ಶನ ವರದಿ
ಕುಮಟಾ : ಇಲ್ಲಿನ ಯುವ ಬ್ರಿಗೇಡ್ ವತಿಯಿಂದ 7ನೇ ಹಂತದ ಕಣ ಕಣದಲ್ಲಿಯೂ ಶಿವ ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕ ಅಣ್ಣಪ್ಪ ನಾಯ್ಕ ಅವರು, ಜನರು ತಮಗೆ ಅವಶ್ಯವಿಲ್ಲದ ಇಲ್ಲವೇ ಹಾಳಾದ ದೇವರ ಪೋಟೋಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಅಂತಹ ದೇವರ ಪೊಟೋಗಳನ್ನು ಸಂಗ್ರಹಿಸಿ ಮಣ್ಣಿನಲ್ಲಿ ಮುಚ್ಚಿ ಅದರ ಮೇಲೆ ಗಿಡ ನೆಡುವ ವಿಶಿಷ್ಠ ಕಾರ್ಯಕ್ರಮ ಇದಾಗಿದೆ. ಕಳೆದ 7 ವರ್ಷಗಳಿಂದ ಯುವ ಬ್ರಿಗೇಡ್ ಕುಮಟಾದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಇಲ್ಲಿರುವ ಅರಳಿಮರದ ಕೆಳಗೆ ಒಂದಷ್ಟು ಪೊಟೋಗಳನ್ನು ತಂದು ಹಾಕಿದ್ದಾರೆ.ನಾವು ಇಂತಹ ಪೊಟೋಗಳನ್ನು ಸಂಗ್ರಹಿಸಿ ಅದರಲ್ಲಿರುವ ಗಾಜು,ಚೌಕಟ್ಟನ್ನು ಬೇರ್ಪಡಿಸಿ ಪೊಟೋವನ್ನು ಮಣ್ಣಿನಲ್ಲಿ ಹಾಕಿ ಅದರ ಮೇಲೆ ಗಿಡವನ್ನು ನೆಡುವ ಕಾರ್ಯವನ್ನು ಮಾಡುತ್ತಿದ್ದೇವೆ.ಜನರು ಕೂಡ ದೇವರ ಪೊಟೋಗಳನ್ನು ಎಲ್ಲೆಂದರಲ್ಲಿ ಎಸೆಯದೇ ಇಂಥಹ ಕಾರ್ಯಕ್ಕೆ ಬಳಸಬೇಕು.ಸಂಗ್ರಹಿಸಿದ ಪೊಟೋಗಳ ಬಗ್ಗೆ ನಮಗೆ ಮಾಹಿತಿ ನೀಡಿದರೆ ಯುವ ಬ್ರಿಗೇಡ್ ಸದಸ್ಯರು ಬಂದು ವಿಲೇವಾರಿ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದರು.
ಈ ಸಂಧರ್ಭದಲ್ಲಿ ಯುವ ಬ್ರಿಗೇಡ್ ಸದಸ್ಯರಾದ ಕಿರಣ ಕೋನಳ್ಳಿ, ಅಮಿತ ಪಟಗಾರ, ಕಿಶೋರ ಶೆಟ್ಟಿ, ಸತೀಶ ಪಟಗಾರ, ಸಂದೀಪ ಮಡಿವಾಳ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 