ಶಿವಕುಮಾರ ಸ್ವಾಮೀಜಿ ಪುಣ್ಯತಿಥಿ: ಮುಖ್ಯಮಂತ್ರಿ ಗೌರವ ಸಲ್ಲಿಕೆ
ಬೆಂಗಳೂರು, ಜ.21, ದಿ.ಶಿವಕುಮಾರ ಸ್ವಾಮೀಜಿಯವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಮೀಜಿಯವರಿಗೆ ಗೌರವ ಸಲ್ಲಿಸಿದ್ದಾರೆ.ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಲು ದಾವೋಸ್ಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅಲ್ಲಿಂದಲೇ ಟ್ವೀಟ್ ಮಾಡಿದ್ದು, ಮೊದಲ ವರ್ಷದ ಪುಣ್ಯತಿಥಿಯ ಕಾರ್ಯಕ್ರಮ ಸಂದರ್ಭದಲ್ಲಿ ಶ್ರಿಗಳ ಅನನ್ಯ ಸೇವೆಯನ್ನು ಗೌರವಪೂರ್ವಕವಾಗಿ ಸ್ಮರಿಸೋಣ ಎಂದು ತಿಳಿಸಿದ್ದಾರೆ.
ಅನ್ನ, ಅಕ್ಷರ ಮತ್ತು ಆಧ್ಯಾತ್ಮಗಳ ತ್ರಿವಿಧ ದಾಸೋಹದ ಅಮೂಲ್ಯ ಸೇವೆಯಿಂದ ನಾಡಿನ ಸಮಸ್ತ ಜನರ ನಡೆದಾಡುವ ದೇವರೇ ಆಗಿದ್ದ ಕಾಯಕ ಯೋಗಿ ಶಿವಕುಮಾರ ಮಹಾಸ್ವಾಮಿಗಳ ಮೊದಲ ವರ್ಷದ ಪುಣ್ಯತಿಥಿ ಸಂದರ್ಭದಲ್ಲಿ ಶ್ರೀಗಳ ಅನನ್ಯ ಸಮಾಜ ಸೇವೆಯನ್ನು ಗೌರಪೂರ್ವಕವಾಗಿ ಸ್ಮರಿಸುತ್ತೇನೆ ಎಂದು ಗೌರವ ಸಲ್ಲಿಸಿದ್ದಾರೆ.ಪುಣ್ಯ ತಿಥಿಯ ಅಂಗವಾಗಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಸಿದ್ದಲಿಂಗಶ್ರೀ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಶ್ರೀಗಳ 50 ಕೆ.ಜಿ.ಪುತ್ಥಳಿಯನ್ನು ಪ್ರತಿಷ್ಠಾಪಿಸಲಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 