ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ಶಿವರಾಮ ಹೆಬ್ಬಾರ್

ಮುಂಡಗೋಡ 19: ತಾಲೂಕಿನ ಕಲ್ಲಕೊಪ್ಪ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ತಗುಲಿ ಪರಿಣಾಮ ದನಗಳು ಸಾವನ್ನಪ್ಪಿ ಮತ್ತೆರಡು ದನಗಳು ತೀವ್ರ ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಭಾನುವಾರ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿದರು ತಾಲೂಕಿನ ಪಾಳಾ ಗ್ರಾ.ಪಂ ವ್ಯಾಪ್ತಿಯಲ್ಲಿ ಕಲ್ಲಕೊಪ್ಪ ಗ್ರಾಮದಲ್ಲಿ ಗುರುವಾರ ತಡ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ದನಗಳು ಸ್ಥಳದಲ್ಲಿ ಸಾವನ್ನಪಿ   ಮತ್ತೆರಡುದನಗಳು ತೀವ್ರ ಗಾಯಗೊಂಡಿದ್ದವು. ಈ ಘಟನೆಯಿಂದ ದನದ ಕೊಟ್ಟಿಗೆ ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿತ್ತು. ಮಾಹಿತಿ ತಿಳಿದ ಶಾಸಕ ಶಿವರಾಮ ಹೆಬ್ಬಾರ್ ಅವರು ಭಾನುವಾರ ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಜಾನುವಾರು ಮಾಲಿಕ ಶಂಕರಗೌಡ ಇಂಗಳಗಿ ಅವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.