'ಜೈ ಹಿಂದ್ ಭಾರ್ಗವ' ಗೆ ಭರದಿಂದ ಚಿತ್ರೀಕರಣ
ಬೆಂಗಳೂರು 23: ಮಾಯಮ್ಮ ಸಿನಿ ಕ್ರಿಯೇಶನ್ಸ್ ಬೆಂಗಳೂರು ಅರ್ಿಸುವ “ಜೈ ಹಿಂದ್ ಭಾರ್ಗವ” ಕನ್ನಡ ಚಲನಚಿತ್ರ ಕಳೆದೊಂದು ವಾರದಿಂದ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ ಚಿತ್ರತಂಡ.
ಭಾರತದ ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ಮತ್ತು ಆಪರೇಶನ್ ಸಿಂಧೂರದ ಕಥಾ ವಸ್ತು ಹೊಂದಿದ್ದು, ಸತತ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಹಾಡುಗಳಿಲ್ಲ. ಬೆಂಗಳೂರು,ಚಿಕ್ಕಬಳ್ಳಾಪೂರ, ಮೈಸೂರು, ಡೊಡ್ಡಬಳ್ಳಾಪೂರ,ಘಾಟಿ ಸುಬ್ರಮಣ್ಯ ಮೊದಲಾದ ಕಡೆ ಚಿತ್ರೀಕರಣ ನಡೆಸಲಿದೆ ಎಂದು ನಿರ್ದೇಶಕ ಎನ್.ಟಿ.ಜಯರಾಮ್ ತಿಳಿಸಿದ್ದಾರೆ.
ಈ ಚಿತ್ರದ ತಾರಾಗಣದಲ್ಲಿ ಮಾಸ್ಟರ್ ಚಿನ್ಮಯ್, ಮಾಸ್ಟರ್ ನಿಶ್ಚಲ್, ಕುಮಾರಿ ಪೂರ್ವಿಕ, ಚಲನಚಿತ್ರ ನಿರ್ದೇಶಕರಾದ ವಸಂತ್ಕುಮಾರ್, ರೋಹಿಣಿ ಮೈಸೂರ್, ಯಶೋದಮ್ಮ ,ಮನು ,ರವಿ , ಸುಪ್ರೀತ್ , ಮಂಜುರ್, ಗೀತಾನಂದಕುಮಾರ್ ಹಾಗೂ ವಿಶೇಷ ಸೈನ್ಯಾಧಿಕಾರಿ ಪಾತ್ರದಲ್ಲಿ ಚಲನಚಿತ್ರ ನಟ-ನಿರ್ದೇಶಕರಾದ ಹರಿಹರನ್.ಬಿ.ಪಿ ಅವರು ನಟಿಸುತ್ತಿದ್ದಾರೆ. ಛಾಯಾಗ್ರಹಣ ಭುವನ್ ರೆಡ್ಡಿ ,ವರ್ಣಾಲಂಕಾರ ಕಾಂತರಾಜು, ಸಂಕಲನ ಮುತ್ತುರಾಜ್ ಟಿ , ಸಂಗೀತ ಶಿವಸತ್ಯ , ಪತ್ರಿಕಾ ಸಂಪರ್ಕ ಕಾರ್ತಿಕ್, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ , ನಿರ್ಮಾಣ ನಿರ್ವಹಣೆ ಜವಾಬ್ದಾರಿ ಬೆಳ್ಳೂ ರಾಜು , ಸಹ ನಿರ್ದೇಶನ ಎಸ್ ಶ್ರೀನಿವಾಸ್ ಅವರದಿದೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆಯನ್ನು ಬರೆದು ಎನ್.ಟಿ. ಜಯರಾಮ್ ರೆಡ್ಡಿ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ನಿರ್ಮಾಪಕರು ಕುಮಾರಿ ತನ್ಮಯ್ ಎನ್ ಆಗಿದ್ದಾರೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಿ ನವಂಬರ್ನಲ್ಲಿ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಚಿತ್ರತಂಡದ್ದಾಗಿದೆ.
ಡಾ.ಪ್ರಭು ಗಂಜಿಹಾಳ
ಮೊ:9448775346
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 