ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬು ಹೊಲಕ್ಕೆ ಬೆಂಕಿ: ರೈತನಿಗೆ ಭಾರೀ ನಷ್ಟ!
Short circuit causes fire in sugarcane field: Huge loss for farmer!
ಮುಂಡಗೋಡ 13 : ಮುಂಡಗೋಡದಿಂದ ಯಲ್ಲಾಪುರ ಕಡೆಗೆ ಸಂಪರ್ಕಿಸುವ ಮುಖ್ಯರಸ್ತೆಯ ಸಮೀಪದಲ್ಲಿರುವ ಸಾವಕ್ಕ ಜೀವನ ಅಗಡಿ ಅವರಿಗೆ ಸೇರಿದ ಹೊಲದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಾಹಿತಿಯಂತೆ, ಒಟ್ಟು 10 ಎಕರೆ ವ್ಯಾಪ್ತಿಯ ಈ ಹೊಲದಲ್ಲಿ ಒಂದು ಎಕರೆ ಪ್ರದೇಶದಲ್ಲಿ ಬೀಜಕ್ಕಾಗಿ ಸಂಗ್ರಹಿಸಿ ಇಡಲಾಗಿದ್ದ ಕಬ್ಬು ಹಾಗೂ 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕುಳೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಸಂಪೂರ್ಣ ಹಾನಿಗೊಳಗಾಗಿದೆ. ಜೊತೆಗೆ, ಹೊಲದಲ್ಲಿ ಅಳವಡಿಸಿದ್ದ ಪೈಪ್ಲೈನ್ ಮತ್ತು ಜೆಟ್ ವ್ಯವಸ್ಥೆಯೂ ಬೆಂಕಿಯಿಂದ ಹಾನೀಗೀಡಾಗಿದೆ. ತಟ್ಟಿಹಳ್ಳಿ ಸರ್ವೇ ನಂಬರ್ 16 ಮತ್ತು 17 ರಲ್ಲಿರುವ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ.
ಹೊಲದ ಮೇಲ್ಭಾಗದಿಂದ ಹಾದು ಹೋಗಿರುವ ಥ್ರೀ-ಫೇಸ್ ವಿದ್ಯುತ್ ಲೈನ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿರಬಹುದೆಂದು ಹೊಲದ ಮಾಲೀಕ ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಶ್ರಮಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ, ಹೊಲದಲ್ಲಿ ಸಂಗ್ರಹಿಸಿ ಇಡಲಾಗಿದ್ದ ಕಬ್ಬಿನ ಬೀಜ ಸಂಪೂರ್ಣ ಸುಟ್ಟುಹೋಗಿದ್ದು, ರೈತನಿಗೆ ಗಮನಾರ್ಹ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಹಾನಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 