ಹುಣಶ್ಯಾಳ ಪಿಜಿ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗೇಶ್ವರ ಜಾತ್ರೆ
Siddalingeshwara fair at Hunashyala PG Kaivalya Ashram
ಘಟಪ್ರಭಾ 22: ಸಮೀಪದ ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ನಿಜವರಿದ ಸಂತ, ಸದು ಹೃದಯವಂತ, ಸಾಹಿತ್ಯ ಶ್ರೀಮಂತ ಪರಮ ಪೂಜ್ಯ ನಿಜಗುಣ ದೇವ ಮಹಾಸ್ವಾಮಿಗಳ ಸಾನಿಧ್ಯದಲ್ಲಿ 27ನೇ ಸತ್ಸಂಗ ಸಂಭ್ರಮ ಮತ್ತು ಅಪ್ಪನ ಜಾತ್ರೆ ಕಾರ್ಯಕ್ರಮವು 2026 ಜನೇವರಿ 1 ರಿಂದ 3ರವರೆಗೆ ವಿಜೃಂಭನೆಯಿಂದ ಜರುಗಲಿದ್ದು ನಾಡಿನ ಜಗದ್ಗುರುಗಳು, ಮಹಾತ್ಮರು, ಗಣ್ಯರು ಆಗಮಿಸಲಿದ್ದಾರೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ತಿಳಿಸಿದರು. ಅವರು ಸೋಮವಾರದಂದು ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ದಿ.1ರಂದು ಸಿದ್ಧಲಿಂಗ ಯತಿರಾಜರ, ಶಾಂಭವಿಮಾತೆಯ, ಸಿದ್ಧಲಿಂಗ ಮಹಾರಾಜರ ಮೂರ್ತಿಗಳಿಗೆ ರುದ್ರಾಭಿಷೇಕ ನಂತರ ‘ಸ್ವಾಂಸ್ಕೃತಿಕ ಸಿರಿ’ ಕಾರ್ಯಕ್ರಮ ಜರುಗಲಿದೆ. ಸಂಜೆ 4 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ: ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರನ್ನು ಶೃಂಗಾರ ರಥದಲ್ಲಿ ಸಹಸ್ರ ಪೂರ್ಣ ಕುಂಭದೊಂದಿಗೆ ಮಹಾತ್ಮರ ಭವ್ಯ ಸ್ವಾಗತ ಮೆರವಣಿಗೆ ಹಾಗೂ ಸಿದ್ಧಲಿಂಗ ಯತಿರಾಜರ ತೊಟ್ಟಿಲೋತ್ಸವ ಜರುಗಲಿದ್ದು, ಅನೇಕ ಮಹಾತ್ಮರು,ಗಣ್ಯರು ಉಪಸ್ಥಿತರಿರುವರು. ನಂತರ ಸನ್ಮಾನ ಕಾರ್ಯಕ್ರಮ ಹಾಗೂ ಮಹಾಪ್ರಸಾದ ಜರುಗಲಿದೆ.
ದಿ.2ರಂದು ತತ್ವಾಮೃತ ಕಾರ್ಯಕ್ರಮದಲ್ಲಿ ಮಹಾತ್ಮರ ಪ್ರವಚನ ಸುಧೆ,ಪೂಜ್ಯರ ತುಲಾಭಾರ ಸೇವೆ ನಂತರ “ಕನ್ನಡ ಕೋಗಿಲೆ” ಖ್ಯಾತಿಯ ಕುಮಾರಿ ಮಹನ್ಯಾ ಗುರು ಪಾಟೀಲ ಇವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ. ಅನೇಕ ಮಹಾತ್ಮರು,ಗಣ್ಯರು ಉಪಸ್ಥಿತರಿರುವರು. ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಸಂಜೆ 6 ಗಂಟೆಗೆ ತತ್ವಾಮೃತ ಕಾರ್ಯಕ್ರಮ ಹಾಗೂ ಪೂಜ್ಯ ನಿಜಗುಣ ದೇವ ಮಹಾಸ್ವಾಮಿಜಿಯವರ ತೂಗುಯ್ಯಾಲೆ ಶೃಂಗಾರ ಕೀರೀಟ ಮಹಾಪೂಜೆ ಜರುಗಲಿದೆ. ದಿ.3ರಂದು ಮುಂಜಾನೆ 10 ಗಂಟೆಗೆ ತತ್ವಾಮೃತ ಕಾರ್ಯಕ್ರಮ ಹಾಗೂ ಪೂಜ್ಯ ನಿಜಗುಣ ದೇವ ಮಹಾಸ್ವಾಮಿಜಿಯವರಿಗೆ ಕೀರೀಟ ಧಾರಣೆ ಮತ್ತು ತುಲಾಭಾರ ಸೇವೆ ಜರುಗಲಿದೆ. ಸಂಜೆ 4 ಗಂಟೆಗೆ ಸಿದ್ಧಲಿಂಗೇಶ್ವರ ಭವ್ಯ ರಥೋತ್ಸವ ರಾತ್ರಿ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಠದ ಪೂಜ್ಯ ನಿಜಗುಣ ದೇವ ಮಹಾಸ್ವಾಮಿಗಳು, ತೊಂಡಿಕಟ್ಟಿಯ ಅಭಿನವ ವೆಂಕಟೇಶ ಮಹಾರಾಜರು, ಬೀದರಿನ ಗಣೇಶ ಮಹಾರಾಜರು ಸೇರಿದಂತೆ ಶ್ರೀಮಠದ ಭಕ್ತರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 