ಕುರಿಗಾಹಿಗಳ ರಕ್ಷಣೆಗೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಮಾ.30: ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗಕಡೆ ಜನ ಕುರಿಗಳನ್ನು ಹೊಡೆಯುವ, ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಾಕ್ಡೌನ್ನಿಂದಾಗಿ ತರಕಾರಿ, ಹಣ್ಣು, ಹೂ ಮಾರಾಟಕ್ಕೆ ಅವಕಾಶ ಇಲ್ಲದೆ ಇವುಗಳನ್ನು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಈ ಉತ್ಪನ್ನಗಳ ಅಲಭ್ಯತೆಯಿಂದಾಗಿ ಬಳಕೆದಾರರು ಕಂಗಾಲಾಗಿದ್ದಾರೆ. ರಾಜ್ಯಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ಉತ್ಪನ್ನಗಳನ್ನು ಖರೀದಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 