ಸಿರಗುಪ್ಪ: ಕೆಂಪು ಪಟ್ಟಿ ಧರಿಸಿ ವಕೀಲರ ಪ್ರತಿಭಟನೆ
ಲೋಕದರ್ಶನ ವರದಿ
ಸಿರಗುಪ್ಪ 06: ಕಾನೂನು ಬದ್ಧವಾಗಿ ಕೆಲಸ ಮಾಡುವ ವಕೀಲರ ಮೇಲೆ ಪೊಲೀಸರು ವಿನಃ ಕಾರಣ ದೌರ್ಜನ್ಯ ಎಸಗುತ್ತಿದ್ದು, ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ವಕೀಲರ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ ಒತ್ತಾಯಿಸಿದರು.
ದೆಹಲಿ ಮತ್ತು ಕಂಪ್ಲಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬುಧವಾರ ಮಾತನಾಡಿದರು. ಕಕ್ಷಿದಾರರ ಪರ ಕೆಲಸ ನಿರ್ವಹಿಸುತ್ತಿರುವ ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಿ, ಸೂಕ್ತ ರಕ್ಷಣೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಕೀಲರು ಕೆಂಪು ಪಟ್ಟಿ ಧರಿಸಿ ಹಲ್ಲೆಗೆ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಕಾರ್ಯದಶರ್ಿ ಎಸ್.ಮಂಜುನಾಥಗೌಡ, ಉಪಾಧ್ಯಕ್ಷ ಬಿ.ಉದಯಶಂಕರ್, ವಕೀಲರಾದ ಸಿದ್ದಲಿಂಗಯ್ಯ ಹಿರೇಮಠ, ವೆಂಕಟೇಶ ಆಚಾರ, ಪಿ. ಮಹಾದೇವಪ್ಪ, ಎನ್.ನಾಗರಾಜ, ಪ್ಯಾಟೇಗೌಡ, ವಿಜಯ್ಕುಮಾರ್, ಎಚ್.ಶೇಖಣ್ಣ, ಯು.ವೆಂಕೋಬ, ವೈ.ವೀರೇಶ, ಸುರೇಶ್ಸ್ವಾಮಿ, ನೆಲಗುಂಟಯ್ಯ, ರಾಜಭಕ್ಷಿ, ತಿರುಮಲ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 