ಸಿರಗುಪ್ಪ: ಹೆಚ್ಚುವರಿ ಬಸ್ ಸಂಚಾರಕ್ಕಾಗಿ ಪ್ರತಿಭಟನೆ
ಲೋಕದರ್ಶನ ವರದಿ
ಸಿರಗುಪ್ಪ 05: ತಾಲೂಕಿನ ವಿವಿಧ ಹಳ್ಳಿಗಳಿಗೆ ಹೆಚ್ಚುವರಿ ಬಸ್ ಸಂಚಾರ, ಸಮಯಪಾಲನೆಗೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ತಾಲೂಕು ಘಟಕದ ನೇತೃತ್ವದಲ್ಲಿ ಕಾಲೇಜು ವಿದ್ಯಾಥರ್ಿಗಳು ಪಟ್ಟಣದ ಸಾರಿಗೆ ಘಟಕದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಸಂಘಟನೆ ತಾಲೂಕು ಸಂಚಾಲಕ ವಿ.ಕುಮಾರ್ನಾಯಕ ಮಾತನಾಡಿ, ತಾಲೂಕಿನ ಸಂಚರಿಸುವ ಒಂದು, ಎರಡು ಬಸ್ಗಳ ಸಿಬ್ಬಂದಿ ಸಮಯ ಪಾಲಿಸುತ್ತಿಲ್ಲ. ವಿದ್ಯಾಥರ್ಿಗಳಿಗೆ ಕಾಲೇಜು ಸಮಯಕ್ಕೆ ತೆರಳಲು ಸಾಧ್ಯವಾಗದೇ ಆರಂಭದ ತರಗತಿಗಳು ತಪ್ಪುತ್ತಿವೆ. ಸೂಕ್ತ ಕ್ರಮಕೈಗೊಂಡು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಘಟಕ ವ್ಯವಸ್ಥಾಪಕ ಗಂಗಾಧರ, ಸ್ಥಳೀಯ ಘಟಕದಲ್ಲಿ ಕಡಿಮೆ ಬಸ್ಗಳಿದ್ದು, ಮೇಲಧಿಕಾರಿಗಳ ಜತೆ ಚಚರ್ಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾಥರ್ಿಗಳು ಪ್ರತಿಭಟನೆ ಕೈ ಬಿಟ್ಟರು. ತಾಲೂಕು ಕಚೇರಿ ಶಿರಸ್ತೇದಾರ್ ಎಸ್.ಲೀಲಾ, ಪಿಎಸ್ಐ ಗಂಗಪ್ಪಬುಲರ್ಿ, ಎಸ್ಎಫ್ಡಿ ಬಳ್ಳಾರಿ ವಿಭಾಗದ ಸಂಚಾಲಕ ಎಂ.ಎಸ್.ಅಂಬಣ್ಣ, ಎಬಿವಿಪಿ ಪದಾಧಿಕಾರಿಗಳಾದ ಜಿ.ಕಾಡಸಿದ್ದ, ಕಲ್ಲೂರು ನಾಗಲಿಂಗ, ವೀರಾಂಜನ್, ಗುರು, ಬಿ.ಕೆ.ವೀರೇಶ್ ಇತರರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 