ಶಿವಕುಮಾರ್ ಜಾಮೀನು ರದ್ದು : ಇಡಿ ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್
ನವದೆಹಲಿ, ನವೆಂಬರ್ 15 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕರ್ನಾಟಕದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಇದರಿಂದ ಕಾನೂನು ಹೋರಾಟದಲ್ಲಿ ಶಿವಕುಮಾರ್ ಅವರಿಗೆ ಜಯ ದೊರಕಿದಂತಾಗಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಇಡಿ ಮನವಿಯನ್ನು ವಜಾ ಮಾಡಿ, ಆದಾಯ ತೆರಿಗೆ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ .
ದೆಹಲಿ ಹೈಕೋರ್ಟ್ 2019 ರ ಅಕ್ಟೋಬರ್ 23 ರಂದು ಶಿವಕುಮಾರ್ ಅವರಿಗೆ ಜಾಮೀನು ನೀಡಿತ್ತು, ಇದನ್ನು ಪ್ರಶ್ನೆ ಮಾಡಿ , ಇಡಿ ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು . ಈ ಪ್ರಕರಣದಲ್ಲಿಸಾಕ್ಷಿ, ಪುರಾವೆಗಳನ್ನು ಕಾಂಗ್ರೆಸ್ ನಾಯಕರು ಹಾಳುಮಾಡಬಹುದು ಎಂಬ ಶಂಕೆಯನ್ನು ಜಾರಿ ನಿರ್ದೇಶನಾಯಲದ ಅಧಿಕಾರಿಗಳು ವ್ಯಕ್ತಪಡಿಸಿದ್ದರು.
ಅಕ್ರಮ ಹಣಕಾಸು ವರ್ಗಾವಣೆ ತಡೆ ಕಾಯ್ದೆಯನ್ವಯ ಶಿವಕುಮಾರ್ ಮತ್ತು ನವದೆಹಲಿಯ ಕರ್ನಾಟಕ ಭವನದ ಉದ್ಯೋಗಿ ಹನುಮಂತಯ್ಯ ವಿರುದ್ಧ ಪ್ರಕರಣ ದಾಖಸಲಾಗಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 