ಇಂಫಾಲ್ನಲ್ಲಿ ಬಾಂಬ್ ಸ್ಫೋಟ: ಐವರು ಪೊಲೀಸರ ಸಹಿತ ಆರು ಮಂದಿಗೆ ಗಾಯ
ಇಂಫಾಲ್, ನವೆಂಬರ್ 5: ಇಲ್ಲಿನ ತಂಗಲ್ ಬಜಾರ್ನಲ್ಲಿ ಇಂದು ಪ್ರಬಲ ಬಾಂಬ್ ಸ್ಫೋಟಗೊಂಡು ಐವರು ಪೊಲೀಸರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ಪೊಲೀಸ್ ತಂಡ ಇಲ್ಲಿನ ಜನಜಂಗುಳಿಯ ಮಾರುಕಟ್ಟೆ ಪ್ರದೇಶದಲ್ಲಿತ್ತು. ಗಾಯಾಳುಗಳನ್ನು ಇಲ್ಲಿನ ರಾಜ್ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರದೇಶದಲ್ಲಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಸಂಪೂರ್ಣ ಹಾನಿಯಾಗಿದೆ. ಪೊಲೀಸರು ತಕ್ಷಣ ಪ್ರದೇಶವನ್ನು ಸುತ್ತುವರಿದು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದರೆ. ಸ್ಫೋಟಕ್ಕೆ ಯಾರು ಕಾರಣ ಎಂದು ಇನ್ನೂ ತಿಳಿದುಬಂದಿಲ್ಲ. ಐಇಡಿ ಇಟ್ಟು ಈ ಸ್ಫೋಟ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಗಾಯಾಳುಗಳನ್ನು ಲಂಗ್ತಾಬಲ್ನ ಲಮಾಬಾಮ್ ಅಮರ್ಜಿತ್ (ಹೆಚ್ಚುವರಿ ಎಸ್ಪಿ ), ತೊಂಗಮ್ ದೇವನ್, (ಸಿಡಿಒ ಎಸ್ಐ), ನಿಂಗ್ಥೌಜಮ್ ಇಬೋಟೊಂಬಾ ಸಿಂಗ್ (ಸಿಟಿ ಪಿಎಸ್ನ ಎಎಸ್ಐ), ಸಿಂಗ್ಜಮೈ ಚಿಂಗಮಾಥಕ್ನ ಖುರೈಜಮ್ ಬೋನಿ (ಸಿಡಿಒ ಎಎಸ್ಐ), ಥೌಬಲ್ ನಿಂಗೋಂಬಮ್ನ ಹುಯಿರೊಂಗ್ಬಾಮ್ ಬೊಬಾಯ್ ಮತ್ತು ನಾಗರಿಕ ಕೃಷ್ಣ ಗುರುಂಗ್ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಇದಕ್ಕೂ ಮುನ್ನ ಭಾನುವಾರ ಮಧ್ಯರಾತ್ರಿ ಇಂಫಾಲ್ ಪೂರ್ವದ ತೆಲಿಪತಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಬಿಎಸ್ಎಫ್ ಯೋಧರು ಗಾಯಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 