ಕಂಕಣ ಸೂರ್ಯ ಗ್ರಹಣ: ನೆಹರೂ ತಾರಾಲಯಕ್ಕಿಲ್ಲ ಪ್ರವೇಶ
ಬೆಂಗಳೂರು, ಜೂ.21, ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ.ಗ್ರಹಣ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರ ಕಷ್ಟವಾಗಲಿದೆ. ಆದ್ದರಿಂದ ನೆಹರು ತಾರಾಲಯದ ವೆಬ್ಸೈಟ್ನಲ್ಲಿ ಗ್ರಹಣದ ನೇರ ಪ್ರಸಾರವಾಗಲಿದ್ದು, ಈ ಮೂಲಕ ಸಾರ್ವಜನಿಕರು ಗ್ರಹಣ ವೀಕ್ಷಿಸಬಹುದು ಎಂದು ನೆಹರು ತಾರಾಲಯದ ನಿರ್ದೇಶಕ ಡಾ.ಪ್ರಮೋದ್ ಗಲಗಲಿ ತಿಳಿಸಿದ್ದಾರೆ.ಇನ್ನು, ಮನೆಯಲ್ಲಿದ್ದವರೂ ಬರಿಗಣ್ಣಿನಿಂದ ಸೂರ್ಯ ಗ್ರಹಣವನ್ನು ವೀಕ್ಷಿಸಬೇಡಿ. ಸೋಲಾರ್ ಕನ್ನಡಕವನ್ನು ಬಳಸಿ ಸೂರ್ಯಗ್ರಹಣವನ್ನು ವೀಕ್ಷಿಸಿ ಎಂದು ಅವರು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 