ಶೀಘ್ರದಲ್ಲೇ ಬೆಳ್ಳಿತೆರೆಗೆ ‘ಆನೆಬಲ‘
anebal
ಬೆಂಗಳೂರು, ಡಿ 23- ಜನತಾ ಟಾಕೀಸ್ ಅವರ ಚೊಚ್ಚಲ ನಿರ್ಮಾಣದ ‘ಆನೆಬಲ‘ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ
ಇದು ಹೊಸ ಪ್ರತಿಭೆಗಳ ಚಿತ್ರವಾಗಿದ್ದು, ಡಾ ವಿ ನಾಗೇಂದ್ರ ಪ್ರಸಾದ್ ರಚನೆಯ ‘ಮುದ್ದೆ ಮುದ್ದೆ‘ ಹಾಗೂ ‘ಮಳವಳ್ಳಿ ಜಾತ್ರೇಲಿ‘ ಹಾಡುಗಳು ಈಗಾಗಲೇ ಜನಪ್ರಿಯವಾಗಿವೆ ಅನೇಕ ಹೊಸ ಅಂಶಗಳನ್ನು ಹೊತ್ತು ಬರುತ್ತಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆಗಳಿವೆ
ಸೂನಗಹಳ್ಳಿ ರಾಜು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ‘ಲೂಸಿಯಾ‘ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಯೋಗರಾಜ್ ಭಟ್ ಒಂದು ಹಾಡನ್ನು ಬರೆದಿದ್ದಾರೆ. ಜೆ.ಟಿ.ಬೆಟ್ಟೇಗೌಡ ಛಾಯಾಗ್ರಹಣ, ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ.
ನಿರ್ಮಾಪಕರಾದ ಎ.ವಿ.ವೇಣುಗೋಪಾಲ್ ಅಡಕಿಮಾರನಹಳ್ಳಿ ಅವರು ರೈತಾಪಿ ಕುಟುಂಬದಿಂದ ಬಂದಿದ್ದು ಅವರ ಚೊಚ್ಚಲ ನಿರ್ಮಾಣದ ಚಿತ್ರ ಇದಾಗಿದೆ. ಸಾಗರ್, ರಕ್ಷಿತ, ಮಲ್ಲರಾಜು, ಚಿರಂಜೀವಿ, ಹರೀಶ್, ಗೌತಮ್, ಮುತ್ತುರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 