ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆ ಕುರಿತು ವಿಶೇಷ ಪಾಠ
Special lesson for students on improving results
ತಾಳಿಕೋಟೆ, ಜು.08: ಪಟ್ಟಣದ ಎಸ್.ಎಸ್. ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಗೆ ಮಂಗಳವಾರ ವಿಜಯಪುರ ಉಪನಿರ್ದೇಶಕರ ಕಚೇರಿಯ ವಿಷಯ ಪರೀವೀಕ್ಷಕರು ಹಾಗೂ ಎಸ್ಎಸ್ಎಲ್ಸಿ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಎಂ. ಬ್ಯಾಹಟ್ಟಿ ಭೇಟಿ ನೀಡಿ, ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶ ಸುಧಾರಣೆ ಮತ್ತು ಉತ್ತಮ ಅಂಕಗಳನ್ನು ಪಡೆಯುವ ಕುರಿತು ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಅನುಸರಿಸಬೇಕಾದ ಅಧ್ಯಯನ ಕ್ರಮ, ಸಮಯ ನಿರ್ವಹಣೆ ಹಾಗೂ ಪರೀಕ್ಷಾ ತಯಾರಿ ಕುರಿತು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಿಆರ್ಿ ಸಂಗಮೇಶ ಎಂ. ಪಾಲ್ಕಿ, ಪ್ರೌಢಶಾಲೆಯ ಮುಖ್ಯಸ್ಥ ಅಶೋಕ್ ಕಟ್ಟಿ, ಬಿ.ಎಂ. ಹಿರೇಹೊಳಿ, ಎಸ್.ವಿ. ಜಾಮಗೊಂಡಿ, ಶಿಕ್ಷಕರಾದ ಎಸ್.ಸಿ. ಗುಡಗುಂಟಿ, ಎಚ್.ಬಿ. ಪಾಟೀಲ, ಎಂ.ಎಸ್. ರಾಯಗೊಂಡ, ಯು.ಎಚ್. ಗಟನೂರ, ಸಿದ್ದನಗೌಡ ಮುದನೂರ, ಸುನೀಲ ಮತ್ತಿಗಟ್ಟಿ, ರೇಣುಕಾ ಬಿರಾದಾರ ಹಾಗೂ ಕೆ.ಎನ್. ನಾಲತವಾಡ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 