ಕಾರ್ಗಿಲ್ ಹುತಾತ್ಮರಿಗೆ ವಿಶೇಷ ಗೌರವ ಸನ್ಮಾನ: ಶೀಗಿಹಳ್ಳಿ
Special tribute to Kargil martyrs: Sheegihalli
ನೇಸರಗಿ. 1999 ರಲ್ಲಿ ಭಾರತ ಪಾಕಿಸ್ತಾನ ಕಾರ್ಗಿಲ್ ಯುದ್ಧದಲ್ಲಿ ನಾವು ಜಯಶಾಲಿ ಆದರೂ ನಮ್ಮ ದೇಶದ ಅನೇಕ ಸೈನಿಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ, ದೇಶ ರಕ್ಷಣೆ ಮಾಡಿ ಹುತಾತ್ಮರಾದರು ಅವರ ನೆನಪಿಗಾಗಿ 26 ಕಾರ್ಗಿಲ್ ವಿಜಯ ಉತ್ಸವ ಪ್ರಯುಕ್ತ ಹುತಾತ್ಮ ಯೋಧರ ಮನೆ ಮನೆಗೆ ತೆರಳಿ, ಅವರ ಪುತ್ತಳಿಗೆ ಸೇನೆಯ ಅಧಿಕಾರಿಗಳಿಂದ ವಿಶಿಷ್ಟ ಗೌರವ ಸಲ್ಲಿಸುವ ಭಾರತೀಯ ಸೇನೆಯ ಯೋಜನೆ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಸೈನಿಕ ಹಾಗೂ ನಿವೃತ್ತ ಪಿಎಸ್ಐ ವಾಯ್ ಎಲ್ ಶೀಗಿಹಳ್ಳಿ ಹೇಳಿದರು.
ಅವರು ಸಮೀಪದ ಮೇಕಲಮರಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ 26ನೇ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧ ದಿ. ಯಶವಂತ ಕೋಲಕಾರ ಅವರ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದರು. ರೈತ ಮುಖಂಡ, ಪತ್ರಕರ್ತ ಮಹಾಂತೇಶ ಹಿರೇಮಠ ಮಾತನಾಡಿ ಕಾರ್ಗಿಲ್ ಹುತಾತ್ಮರಿಗೆ ಗೌರವ ಸಲ್ಲಿಸುವದು ಎಲ್ಲ ಭಾರತೀಯರ ಕರ್ತವ್ಯ ಅಗಿದ್ದು ಮಡಿಕೇರಿಯ ಜನರಲ ಕರಿಯಪ್ಪ ಅವರಂತ ಶ್ರೇಷ್ಠ ಸೇನಾ ಹೋರಾಟಗಾರರನ್ನು ನೆನೆಸುವ ಕಾರ್ಯ ಭಾರತೀಯ ಸೇನೆ ಮಾಡಿದ್ದು ಹೆಮ್ಮೆಯ ಕಾರ್ಯ ಹಾಗೂ ಹುತಾತ್ಮರಾದ ಕಾರ್ಗಿಲ್ ಯೋಧರ ಕುಟುಂಬದ ಜೊತೆ ಭಾರತೀಯ ಸೇನೆ ಹಾಗೂ ಇಡೀ ಭಾರತ ದೇಶವೇ ಇದ್ದು ಹುತಾತ್ಮ ಕುಟುಂಬದ ನೆರವಿಗೆ ಸದಾ ನಾವೆಲ್ಲರೂ ಕೈಜೋಡಿಸಬೇಕು ಎಂದರು.
ಈ ಕಾರ್ಗಿಲ್ ವಿಜಯ ಉತ್ಸವದಲ್ಲಿ ಮಾಜಿ ಜಿಪಂ ಸದಸ್ಯ ಹಾಗೂ ನೇಸರಗಿ ಬ್ಲಾಕ್ ಕಾಂಗೇಸ್ ಅಧ್ಯಕ್ಷ ನಿಂಗಪ್ಪ ಅರಿಕೇರಿ ಹಾಗೂ ಹೈದರಾಬಾದ ರಿಜಿಮೆಂಟಿನ ಸೇನೆಯ ಅಧಿಕಾರಿಗಳಾದ ನಾಯಕ ಸುಬೇದಾರ ತಿಲಕ್ ಸಿಎಲ್, ಆರ್ಎಚ್ ಎಮ್ ರಾಜೇಶ, ಹವಾಲ್ದಾರ ಲಕ್ಷ್ಮಣ, ಹವಾಲ್ದಾರ ಸಾಯೋಜ, ಹವಾಲ್ದಾರ ಸಂದೀಪ ಅವರುಗಳು ಹುತಾತ್ಮ ಯೋಧ ದಿ. ಯಶವಂತ ಕೋಲಕಾರ ಅವರ ಪುತ್ತಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಹುತಾತ್ಮ ಹೋಧರ ಪತ್ನಿ ಸಾವಿತ್ರಿದೇವಿ ಯಶವಂತ ಕೋಲಕಾರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಭಾರತಿ ತಿಗಡಿ, ಉಪಾಧ್ಯಕ್ಷ ಕಾಶಿಮ್ ಜಮಾದಾರ, ನೇಸರಗಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರ್ಪ ಸೋಮಣ್ಣವರ, ಮಂಜುನಾಥ ಹುಲಮನಿ, ಬಾಬು ಹೊಸಮನಿ, ಶಂಕರ ಬಡಿಗೇರ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ನೇಸರಗಿ, ಇಂಚಲ, ಯರಗಟ್ಟಿ ಸೇರಿದಂತೆ ಅನೇಕ ಮಾಜಿ ಸೈನಿಕರ ಸಂಘದ ಸದಸ್ಯರು, ನಿವೃತ್ತ ಹಾಗೂ ಕಾರ್ಯ ನಿರತ ಸೈನಿಕರು, ಅವರ ಕುಟುಂಬಸ್ಥರು, ಮೇಕಲಮರಡಿ ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 