ಕ್ರೀಡೆಗಳು ಆರೋಗ್ಯಕ್ಕೆ ವರದಾನ: ಆರ್ ಟಿ ಪಾಟೀಲ
Sports boon for health: RT Patil
ರನ್ನ ಬೆಳಗಲಿ 6: ಪಟ್ಟಣದ ಸಮೀಪದ ಗ್ರಾಮ ನಾಗರಾಳ ಮಾಧವಾನಂದ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಸನ್ 2024-25ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ಸಮಾರಂಭ ಜರಗಿತು.
ಸಂಸ್ಥೆಯ ಅಧ್ಯಕ್ಷ ಆರ್ ಟಿ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಅವರು ಕ್ರೀಡೆಗಳು ಆರೋಗ್ಯಕ್ಕೆ ವರದಾನವಾಗಿವೆ ದಿನನಿತ್ಯದ ಪಠ್ಯ ಪುಸ್ತಕಗಳ ಅಭ್ಯಾಸಗಳ ಜೊತೆಗೆ ಆಟೋಟಗಲಿ ಭಾಗವಹಿಸಿ ಮೊಬೈಲ್ ನಿಂದ ದೂರ ಇರಬೇಕೆಂದು ತಿಳಿಸಿದರು.ಸಂಸ್ಥೆಯ ಉಪಾಧ್ಯಕ್ಷ ವೆಂಕಪ್ಪ ಬಿ ಪಾಟೀಲ ಸಂಸ್ಥೆಯ ಕಾರ್ಯದರ್ಶಿ ಆಯ್ ಅರ ಗಂಜಿ ಊರಿನ ಪ್ರಮುಖರಾದ ದುಂಡಪ್ಪ ಜೈನಾಪುರ, ಯಲ್ಲಪ್ಪ ಚನ್ನಾಪುರ, ಭೀಮಶಿ ನೇಗಿ, ಮಾನಿಂಗ ಭಜಂತ್ರಿ, ಸಿದ್ದಲಿಂಗಪ್ಪ ಪಾಟೀಲ, ಹರೀಶಗೌಡ ಪಾಟೀಲ, ಸಂಸ್ಥೆಯ ಮುಖ್ಯ ಗುರು ಅಶೋಕ್ ಯಡಹಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ನಿರೂಪಣೆಯನ್ನು ಕೃಷ್ಣಾ ಹೊಸಮನಿ, ಕ್ರೀಡಾ ಜ್ಯೋತಿ ಕಾರ್ಯಕ್ರಮ ಗೋವಿಂದ ಹಾದಿಮನಿ ಮತ್ತು ವಂದನಾರೆ್ಣಯನ್ನು ರಾಚಪ್ಪ ಮಾದರ, ಪ್ರತಿಜ್ಞಾವಿಧಿಯನ್ನು ಗದಿಗೆಪ್ಪ ನೇಸೂರ ಬೋಧಿಸಿದರು.
ಕ್ರೀಡಾಕೂಟದ ಉಸ್ತುವಾರಿಯನ್ನು ದೈ ಶಿ. ಮಲ್ಲಪ್ಪ ಹಸಬಿ ಮತ್ತು ವಿನೋದ ಕಾಂಬ್ಳೆ ವಹಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 