ಶ್ರೀಕೃಷ್ಣ ಜನ್ಮಾಷ್ಟಮಿ: ಮಗು ಮೊಸರಿನ ಗಡಿಗೆ ಒಡೆಯುವ ಕಾರ್ಯಕ್ರಮ
Sri Krishna Janmashtami: A program where a child breaks the curd barrier
ಸಿಂದಗಿ 16: ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ ಪೂರ್ವಪ್ರಾಥಮಿಕ ಶಾಲೆ ಮತ್ತು ಕ್ರಿಯೇಟಿಚ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಶ್ರೀಕೃಷ್ಣ ವೇಷಧಾರಿ ಮಗು ಮೊಸರಿನ ಗಡಿಗೆ ಒಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶಾಲಾ ಮಕ್ಕಳು ಕೃಷ್ಣ, ರಾಧೆಯರ ವೇಷದೊಂದಿಗೆ ಭಾಗವಹಿಸಿದ್ದರು. ತಾಯಂದಿರು ತಮ್ಮ ಮುದ್ದಿನ ಮಕ್ಕಳಿಗೆ ಬಾಲಕೃಷ್ಣ, ರಾಧೆಯ ಅಲಂಕಾರ ಮಾಡಿ ಸಂಭ್ರಮಿಸಿದರು. ತಾಯಂದಿರು ಯಶೋಧೆಯ ವೇಷದೊಂದಿಗೆ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ, ಮನಗೂಳಿ ಆಸ್ಪತ್ರೆಯ ಮುಖ್ಯಸ್ಥೆ ಡಾ.ಸಂಧ್ಯಾ ಮನಗೂಳಿ ಅವರು ಶ್ರೀ ಕೃಷ್ಣನ ಕುರಿತು ಮಾತನಾಡಿದ ನಂತರ ಕೃಷ್ಣ, ರಾಧೆಯರ ವೇಷದೊಂದಿಗೆ ಭಾಗವಹಿಸಿದ ಮಕ್ಕಳ ಕುರಿತು ಮಾತನಾಡಿದರು.
ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಸಾದನಾ ಇಮಡೆ, ಮಂಗಲಾ ಬಮ್ಮಣ್ಣಿ, ದಾನಮ್ಮ ಕೋರಿ, ಪ್ರೀಯಾ ಪವಾಡೆ, ರೇವತಿ ಬಳೂಂಡಗಿ, ಸುಶ್ಮಿತಾ ಕೋರಿ, ಸಂಚಿತಾ ಸೂರಪೂರ, ಸಿಬ್ಬಂಧಿಗಳಾದ ಅಂಬಿಕಾರಿ ಕರಿಶೆಟ್ಟಿ, ಹೇಮಾ ಬಡಿಗೇರ, ರೆಹಮತ್ತಬಿ, ಆನಂದಯ್ಯಸ್ವಾಮಿ ಹಿರೇಮಠ ಹಾಗೂ ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 