ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ದಾಳಿ
ರಾಮೇಶ್ವರಂ, ನ 21: ಶ್ರೀಲಂಕಾ ನೌಕಾಪಡೆ ಗುರುವಾರ ವಿವಾದಾತ್ಮಕ ಕಚ್ಚತೀವು ದ್ವೀಪದ ಬಳಿ ಮೀನುಗಾರಿಕಾ ಚಟುವಟಿಕೆಗಳಲ್ಲಿ ತೊಡಗಿದ್ದ ಭಾರತೀಯ ಮೀನುಗಾರರ ಮೇಲೆ ದಾಳಿ ನಡೆಸಿದೆ
ಸುಮಾರು 497 ಯಾಂತ್ರಿಕೃತ ದೋಣಿಗಳಲ್ಲಿ ಬುಧವಾರ 2,500 ಕ್ಕೂ ಹೆಚ್ಚು ಮೀನುಗಾರರು ಸಮುದ್ರಕ್ಕೆ ಇಳಿದಿದ್ದ ವೇಳೆ ಈ ಹಲ್ಲೆ ನಡೆಸಲಾಗಿದೆ ಎಂದು ಗುರುವಾರ ಮೀನುಗಾರಿಕಾ ಜೆಟ್ಟಿಗೆ ಮರಳಿರುವ ಮೀನುಗಾರರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ
ಗಸ್ತಿನಲ್ಲಿದ್ದ ಲಂಕಾ ನೌಕಾಪಡೆಯ ಯೋಧರು, ಬಂದೂಕು ಹಿಡಿದು ತಮ್ಮನ್ನು ಸುತ್ತುವರಿದು, ಇಲ್ಲಿಂದ ತೆರಳುವಂತೆ ಬೆದರಿಸಿದರು. ಮೀನು ಹಿಡಿಯುವ ಬಲೆಗಳನ್ನು ಸಮುದ್ರಕ್ಕೆಸೆದರು ಎಂದು ತಿಳಿಸಿದ್ದಾರೆ.
ಪದೇಪದೆ ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಹಲ್ಲೆ ನಡೆಸುತ್ತಿದ್ದು, ಈ ವಿಷಯವನ್ನು ಶ್ರೀಲಂಕಾ ಸಕರ್ಾರದೊಂದಿಗೆ ಕೈಗೆತ್ತಿಕೊಳ್ಳಬೇಕು ಎಂದು ರಾಮೇಶ್ವರಂನ ವಿವಿಧ ಮೀನುಗಾರರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ.
ಈ ತಿಂಗಳಲ್ಲಿ ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ನಡೆಸಿದ ಎರಡನೇ ದಾಳಿ ಇದು. ಇದಕ್ಕೂ ಮುನ್ನ ಮಂಗಳವಾರ ಮೀನುಗಾರಿಕೆಯಲ್ಲಿ ತೊಡಗಿದ್ದ ಭಾರತೀಯ ಬೆಸ್ತರ ಮೀನುಗಾರರ ಬೆನ್ನಟ್ಟಿ ಓಡಿಸಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 