ಭಕ್ತರಿಗೆ ಇಂದಿನಿಂದ ಶೃಂಗೇರಿ ಶಾರದಾಂಬೆ ದರ್ಶನಭಾಗ್ಯ ....!!
ಬೆಂಗಳೂರು , ಜೂನ್ 8, ರಾಜ್ಯದಲ್ಲಿ ಭಕ್ತರಪಾಲಿಗೆ ಇಂದಿನಿಂದ ದೇವ -ದೇವತೆಗಳ ದರ್ಶನ ಭಾಗ್ಯ ...!ಅಂತೆಯೇ ಶೃಂಗೇರಿ ಶಾರದಾಂಬೆ ದೇವಾಲಯ ಕೂಡ ಇಂದಿನಿಂದ ಭಕ್ತರ ಪಾಲಿಗೆ ತೆರೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯದ ಅನೇಕ ದೇವಾಲಯಗಳು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ದೇವಾಲಯಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಂತೆಯೇ ಶೃಂಗೇರಿ ಶಾರದಾಂಬೆ ದೇವಾಲಯ ಕೂಡ ಇಂದಿನಿಂದ ತೆರೆಯಲಿದೆ. ಈ ಸಂಬಂಧ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ, ಶೃಂಗೇರಿ ಶಾರದಾಂಬೆ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು,ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಹಾಗೂ ಸಂಜೆ 5ರಿಂದ 8 ಗಂಟೆಯವರಗೆ ಮಾತ್ರ ದೇವಾಲಯ ತೆರೆಯಲಿದೆ. ಇನ್ನೂ, ದೇವಾಲಯದೊಳಗೆ ಒಂದು ಬಾರಿಗೆ 25 ಭಕ್ತರಿಗೆ ಮಾತ್ರ ಪ್ರವೇಶವಿರಲಿದೆ. ಸಾಮಾಜಿಕಅಂತರ ಕಾಪಾಡಬೇಕು,ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ಕೆಲವು ಷರತ್ತು ಹಾಕಲಾಗಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 