ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭ
ಬೆಂಗಳೂರು, ನ. 4: ರೈತರ ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆ ಸಾಲ ಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ತಮ್ಮ ಮನೆಗೆ ಬರುತ್ತಿದ್ದು, ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ರೈತರ 'ಬೆಳೆ ಸಾಲ ಮನ್ನಾ ಸಹಾಯವಾಣಿ' ಆರಂಭಿಸಿರುವುದಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಕನಸಿನ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೊಳಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 