ಇದೇ 25ರಿಂದ ಕಿರುತೆರೆ ಧಾರಾವಾಹಿ ಚಿತ್ರೀಕರಣ ಆರಂಭ : ಕೆಟಿವಿಎ
ಬೆಂಗಳೂರು, ಮೇ 07,ಕೊರೋನಾ ಪ್ರಕರಣಗಳು ರಾಜ್ಯ ಹಾಗೂ ದೇಶವನ್ನು ತಲ್ಲಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ನಿಯಂತ್ರಿಸಲು ಕಿರುತೆರೆ ಧಾರಾವಾಹಿಗಳ ಚಿತ್ರೀಕರಣ ನಿಷೇಧಿಸಲಾಗಿತ್ತು. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ –ಕೆಟಿವಿದೆ ಮನವಿಯ ಮೇರೆಗೆ ಎರಡು ದಿನಗಳ ಹಿಂದಷ್ಟೇ ಧಾರಾವಾಹಿಗಳ ಷರತ್ತುಬದ್ಧ ಒಳಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ.ಅನುಮತಿಗಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, , ಕಂದಾಯ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಆರ್. ಅಶೋಕ ಅವರಿಗೆ ಧನ್ಯವಾದ ಸಲ್ಲಿಸಿರುವ ಕೆಟಿವಿಎ, ಇದೇ 25 ರಿಂದ ಚಿತ್ರೀಕರಣ ಆರಂಭಿಸಲು ನಿರ್ಧರಿಸಿದೆ. ಅರ್ಧದಲ್ಲೇ ನಿಂತಿರುವ ಧಾರಾವಾಹಿಗಳ ಚಿತ್ರೀಕರಣವನ್ನು ಇಂದಿನ ಸ್ಥಿತಿಗತಿಗೆ ಅನುಗುಣವಾಗಿ ಅಳವಡಿಸಿಕೊಂಡು ಚಿತ್ರೀಕರಿಸುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಟಿವಿಎ ಅಧ್ಯಕ್ಷ ಎಸ್. ವಿ. ಶಿವಕುಮಾರ್, ಹಾಗೂ ಕಾರ್ಯದರ್ಶಿ ಡಿ.ಸಿ. ವೀರೇಂದ್ರ ಬೆಳ್ಳಿಚುಕ್ಕಿ ಹೇಳಿಕೆ ನೀಡಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 