ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
State Farmers Union, Hasiru Sena protest demanding various demands
ಬೆಳಗಾವಿ 09: ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ಸುವರ್ಣ ಸೌಧದ ಬಳಿಯ ಸುವರ್ಣ ಗಾರ್ಡನ್ ಟೆಂಟ್ನಲ್ಲಿ ಸರ್ಕಾರದ ವಿರುದ್ಧ ನೂರಾರು ರೈತರು ಘೋಷಣೆ ಕೂಗಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ ಪಡೆಯಬೇಕು. ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿ ಪಡಿಸಬೇಕು. ವಿದ್ಯುತ್ ಪರಿಕರಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ಕಬ್ಬಿಗೆ ಪ್ರತಿ ಟನ್ಗೆ 3,500 ನಿಗದಿ ಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕರಾಳ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು. ರಾಜ್ಯದ ನೀರಾವರಿ ಯೋಜನೆಗಳಾದ ಮಾದಾಯಿ, ಕಳಸಾ ಬಂಡೂರಿ, ಕೃಷ್ಣ, ತುಂಗಭದ್ರಾ ನದಿಗೆ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಚಾಮರಾಜ ನಗರ ಜಿಲ್ಲೆ ಹಾಗೂ ಗುಂಡ್ಲ ಪೇಟೆ ತಾಲೂಕಿನ ಗಾಂಧಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಬೇಕು ಜೊತೆಗೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟಿಸಲಾಯಿತು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 