ಹಿಂದಿ ರಾಷ್ಟ್ರಬಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ: ಸಿದ್ದರಾಮಯ್ಯ
ಬೆಂಗಳೂರು, ಸೆ 14 ಹಿಂದಿ ರಾಷ್ಟ್ರಭಾಷೆ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದ ರಾಮಯ್ಯ ಹಾಗೂ ಎಚ್ ಡಿ ಕುಮಾರ ಸ್ವಾಮಿ ವಿರೊಧಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ, " ಹಿಂದಿ ರಾಷ್ಟ್ರ ಭಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ. ಅದು ಕನ್ನಡದಂತೆಯೇ 22 ಅಧಿಕೃತ ಭಾಷೆಗಳಲ್ಲಿ ಒಂದು ಎನ್ನುವುದು ತಿಳಿದಿರಲಿ. ಸುಳ್ಳು-ತಪ್ಪುಮಾಹಿತಿ ಮೂಲಕ ಭಾಷೆಯನ್ನು ಬೆಳೆಸಲಾಗದು. ಭಾಷೆ ಪರಸ್ಪರ ಪ್ರೀತಿ ಮತ್ತು ಕೊಡು-ಕೊಳ್ಳುವಿಕೆಯಿಂದ ಬೆಳೆಯುತ್ತದೆ" ಎಂದು ಹೇಳಿದ್ದಾರೆ. ಇದೇ ವಿಷಯಕ್ಕೆ ಸಿದ್ದರಾಮಯ್ಯ ಅವರ ಕೈ ಜೋಡಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, "ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ" ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. "ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಈ ಹಿಂದೆ ಇದ್ದ ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾ-ಖಂಡಿತವಾಗಿ ವಿರೋಧಿಸುತ್ತೇನೆ" ಎಂದು ಶುಕ್ರವಾರವೂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 