ಹಿಂದಿ ರಾಷ್ಟ್ರಬಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ: ಸಿದ್ದರಾಮಯ್ಯ
ಬೆಂಗಳೂರು, ಸೆ 14 ಹಿಂದಿ ರಾಷ್ಟ್ರಭಾಷೆ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದ ರಾಮಯ್ಯ ಹಾಗೂ ಎಚ್ ಡಿ ಕುಮಾರ ಸ್ವಾಮಿ ವಿರೊಧಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ, " ಹಿಂದಿ ರಾಷ್ಟ್ರ ಭಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ. ಅದು ಕನ್ನಡದಂತೆಯೇ 22 ಅಧಿಕೃತ ಭಾಷೆಗಳಲ್ಲಿ ಒಂದು ಎನ್ನುವುದು ತಿಳಿದಿರಲಿ. ಸುಳ್ಳು-ತಪ್ಪುಮಾಹಿತಿ ಮೂಲಕ ಭಾಷೆಯನ್ನು ಬೆಳೆಸಲಾಗದು. ಭಾಷೆ ಪರಸ್ಪರ ಪ್ರೀತಿ ಮತ್ತು ಕೊಡು-ಕೊಳ್ಳುವಿಕೆಯಿಂದ ಬೆಳೆಯುತ್ತದೆ" ಎಂದು ಹೇಳಿದ್ದಾರೆ. ಇದೇ ವಿಷಯಕ್ಕೆ ಸಿದ್ದರಾಮಯ್ಯ ಅವರ ಕೈ ಜೋಡಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, "ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ" ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. "ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಈ ಹಿಂದೆ ಇದ್ದ ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾ-ಖಂಡಿತವಾಗಿ ವಿರೋಧಿಸುತ್ತೇನೆ" ಎಂದು ಶುಕ್ರವಾರವೂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 