ವಿದ್ಯಾರ್ಥಿ ಕು. ಸಾಯಿಗಣೇಶ ಮಡಿವಾಳಗೆ ರಾಷ್ಟ್ರಮಟ್ಟದ ಪ್ರಶಸ್ತಿ
Student Ms. Saiganesh Madiwala receives national level award
ವಿದ್ಯಾರ್ಥಿ ಕು. ಸಾಯಿಗಣೇಶ ಮಡಿವಾಳಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಕಾರವಾರ 13: “ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ” “ಋಖಕಋಇ-ಒಂಓಂಏ” ಇವರು ಆಯೋಜಿಸಿದ ವಿಜ್ಞಾನ ಹಾಗೂ ತಂತ್ರಜ್ಞಾನ ಪ್ರೇರಿತ ಸಂಶೋಧನಾ ಪುರಸ್ಕಾರದಡಿಯಲ್ಲಿ ಮಕ್ಕಳಲ್ಲಿ ವಿಜ್ಞಾನದ ಹೊಸತನವನ್ನು ಹುರಿದುಂಬಿಸುವ ರಾಷ್ಟ್ರಮಟ್ಟದ “ಇನ್ಸ್ಪಾಯರ್ ಅವಾರ್ಡ್: 2024-25” ಗೆ ಬಾಲಮಂದಿರ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕು. ಸಾಯಿಗಣೇಶ ರತ್ನಾಕರ ಮಡಿವಾಳ ಇವನು ಸಿದ್ಧಪಡಿಸಿದ “ಸ್ಮಾರ್ಟ್ ಪ್ಯಾನ್ ಪ್ರಾಜೆಕ್ಟ್” ಇದು ಆಯ್ಕೆಯಾಗಿರುತ್ತದೆ. ಈ “ಇನ್ಸ್ಪಾಯರ್ ಅವಾರ್ಡ್” ಎಂಬುದು ವಿಜ್ಞಾನ ಮತ್ತು ತಾಂತ್ರಿಕದಲ್ಲಿನ ಸೃಜನಶೀಲತೆಯನ್ನು ಉತ್ತೇಜಿಸಲು ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ “ಋಖಕಋಇ” ಯೋಜನೆಯ ಅಂಗವಾಗಿ ನಡೆದುಕೊಂಡು ಹೋಗುವ ಒಂದು ರಾಷ್ಟ್ರಮಟ್ಟದ ಪಠ್ಯಾಧಾರಿತ ಕಾರ್ಯಕ್ರಮವಾಗಿದೆ. ಅದು ಶಾಲಾ ಮಕ್ಕಳಿಂದ ಒಂದೊಂದು ನವೀನ ರೀತಿಯ ವಿಜ್ಞಾನ ಆವಿಷ್ಕಾರಗಳ ಪರಿಕಲ್ಪನೆಗಳನ್ನು ಆಯ್ಕೆಮಾಡಿ, ಪ್ರಶಸ್ತಿಗಳನ್ನು ನೀಡುತ್ತಿದೆ. ಅದೇ ರೀತಿ 2024-25ನೇ ಸಾಲಿನಲ್ಲಿ ಬಾಲಮಂದಿರ ಪ್ರೌಢಶಾಲೆಯಿಂದ ಐದು ವಿದ್ಯಾರ್ಥಿಗಳ ಪ್ರಾಜೆಕ್ಟ್ನ್ನು ಆನ್ಲೈನ್ನಲ್ಲಿ ಕಳುಹಿಸಲಾಗಿತ್ತು. ಅದರಲ್ಲಿ ಕು. ಸಾಯಿಗಣೇಶ ರತ್ನಾಕರ ಮಡಿವಾಳ ಸಲ್ಲಿಸಿದ “ಸ್ಮಾರ್ಟ್ ಪ್ಯಾನ್” ಪ್ರಾಜೆಕ್ಟ್ ಆಯ್ಕೆಯಾಗಿರುತ್ತದೆ. ಇವನ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಎಸ್. ಪಿ. ಕಾಮತ್, ಉಪಾಧ್ಯಕ್ಷರಾದ ಅನಿರುದ್ಧ ಹಳದಿಪುರ ಹಾಗೂ ಆಡಳಿತಾಧಿಕಾರಿ ಜಿ. ಪಿ. ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿರುತ್ತಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 